ಹಾನಗಲ್ಲ:ತಾಲೂಕಿನ ಪ್ರತಿ ಗ್ರಾಮದಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ರಾಜ್ಯ ಸರಕಾರದಿಂದ ಅನುಷ್ಠಾನಗೊಳ್ಳುತ್ತಿವೆ. ಹಿಂದುಳಿದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ನಮ್ಮ ಕಾಂಗ್ರೆಸ್ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಶಾಸಕ ಮನೋಹರ ತಹಶೀಲ್ದಾರ ಹೇಳಿದರು.
ಗುರುವಾರ ತಾಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ 5 ಲಕ್ಷ ರೂ. ವೆಚ್ಚದ ಮುಸ್ಲಿಂ ಸಮುದಾಯ ಭವನದ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಎಸ್ಸಿ ಜನಾಂಗ ಹೆಚ್ಚಾಗಿರುವ ಕಾಲೊನಿಗಳಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಚರಂಡಿ, ಕಾಂಕ್ರಿಟ್ ರಸ್ತೆಗಳನ್ನು ನಿರ್ಮಿಸಲಾಗಿದೆ. ನಿವೇಶನ ಹೊಂದಿ, ಮನೆ ಇಲ್ಲದ ಹಿಂದುಳಿದ ಜನಾಂಗದ ಜನರಿಗೆ ಮನೆ ನಿರ್ಮಾಣಕ್ಕೆ ಧನಸಹಾಯ ನೀಡಲಾಗುತ್ತಿದೆ, ಎಲ್ಲರಿಗೂ ಸಮಪಾಲು ಎಲ್ಲರಿಗೂ ಸಮಬಾಳು ಎಂಬ ತತ್ವದಡಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ಸಿಎಂ ಸಿದ್ದರಾಮಯ್ಯನವರು ಶಿಕ್ಷ ಣಕ್ಕೆ ಹೆಚ್ಚು ಒತ್ತು ಕೊಟ್ಟು ಎಸ್ಸಿ, ಎಸ್ಟಿ ಜನಾಂಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷ ಣ ಸಂಸ್ಥೆ, ಸಮುದಾಯ ಭವನ, ಶಾದಿಮಹಲ್, ಅಂಬೇಡ್ಕರ ಭವನ, ವಾಲ್ಮೀಕಿ ಭವನ, ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಮಾತಿಗೆ ತಕ್ಕಂತೆ ನಡೆದಿದೆ ಎಂದರು.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎ.ಎಂ.ಪಠಾಣ, ಜಿ.ಪಂ.ಸದಸ್ಯ ರಾಘವೇಂದ್ರ ತಹಶೀಲ್ದಾರ, ಮುಖಂಡರಾದ ಖ್ವಾಜಾ ಮೊಹಿನುದ್ದೀನ ಶೇಖ್, ಪುಟ್ಟಯ್ಯ ಹಿರೇಮಠ, ನೂರಅಹ್ಮದ್ ಮುಖಾಸಿ, ಎಸ್.ಜೆ.ಉರಣಕರ, ನಿರಂಜನ ಹಿರೇಮಠ, ರಾಜಣ್ಣ ಹಿರೇಮಠ, ಜಾಫರ ಸಾಬ್ ತಹಶೀಲ್ದಾರ, ಸೋಮಶೇಖರ ಪಟ್ಟಣಶೆಟ್ಟಿ, ಶಿವಶಂಕರ ಹಿರೇಮಠ, ಗುಡ್ಡಯ್ಯ ಉರಣಕರ ಮುಂತಾದವರಿದ್ದರು.