ಆ್ಯಪ್ನಗರ

ಇವಿಎಂಗಳ ದುರ್ಬಳಕೆ: ಕ್ರಮಕ್ಕೆ ಆಗ್ರಹ

ರಾಣೇಬೆನ್ನೂರ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಮತದಾನದ ವೇಳೆ ವಿವಿ ಪ್ಯಾಟ್‌ ಮತ್ತು ಇವಿಎಂಗಳನ್ನು ಹ್ಯಾಕ್‌ ಮಾಡಿ ದುರ್ಬಳಕೆ ಮಾಡಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಅಂತಹ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಭಾರತ ಸರಕಾರದ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯ ಚುನಾವಣಾ ಆಯುಕ್ತರು, ಕರ್ನಾಟಕ ರಾಜ್ಯದ ರಾಜ್ಯಪಾಲರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

Vijaya Karnataka 29 May 2019, 5:00 am
ರಾಣೇಬೆನ್ನೂರ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಮತದಾನದ ವೇಳೆ ವಿವಿ ಪ್ಯಾಟ್‌ ಮತ್ತು ಇವಿಎಂಗಳನ್ನು ಹ್ಯಾಕ್‌ ಮಾಡಿ ದುರ್ಬಳಕೆ ಮಾಡಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಅಂತಹ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಭಾರತ ಸರಕಾರದ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯ ಚುನಾವಣಾ ಆಯುಕ್ತರು, ಕರ್ನಾಟಕ ರಾಜ್ಯದ ರಾಜ್ಯಪಾಲರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಾವೇರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
Vijaya Karnataka Web exploitation of evms demand for action
ಇವಿಎಂಗಳ ದುರ್ಬಳಕೆ: ಕ್ರಮಕ್ಕೆ ಆಗ್ರಹ


ಪತ್ರದಲ್ಲಿ ಉಲ್ಲೇಖಿಸಿರುವಂತೆ, ಇವಿಎಂ ಮತ್ತು ವಿವಿ ಪ್ಯಾಟ್‌ಗಳಲ್ಲಿ ವಂಚನೆ ಮಾಡಲಾಗಿದೆ. ವಿಶೇಷವಾಗಿ ಉತ್ತರ ಪ್ರದೇಶ, ಬಿಹಾರ ರಾಜ್ಯಗಳ ಕೆಲ ಕ್ಷೇತ್ರಗಳಲ್ಲಿ ಚುನಾವಣಾ ಆಯೋಗದಿಂದ ಇವಿಎಂಗಳನ್ನು ಸಾಗಿಸುವಾಗ ಸಂಶಯಾಸ್ಪದ ನಡೆ ಕಂಡು ಬಂದಿದೆ. ಮತ ಎಣಿಕೆ ಸಂದರ್ಭದಲ್ಲಿ ಎಲ್ಲ ವಿವಿ ಪ್ಯಾಟ್‌ ಮತ್ತು ಇವಿಎಂಗಳ ತಾಳೆ ಮಾಡಿದಲ್ಲಿ ಪಾರದರ್ಶಕತೆ ಕಾಣುತ್ತಿತ್ತು. ಆದ್ದರಿಂದ ಕೇಂದ್ರ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಿ ಅಕ್ರಮ ನಡೆದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಬೇಕು. ಇಲ್ಲವಾದರೆ ರೈತ ಸಂಘದ ವತಿಯಿಂದ ಸುಪ್ರಿಂಕೋರ್ಟಿನ ಮೋರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ