ಆ್ಯಪ್ನಗರ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ರೈತ ಸಂಘಟನೆಗಳು

ಎಪಿಎಂಸಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ರೈತರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನಂತರ ಸಿಎಂ ಹಾಗೂ ಶಾಸಕ ಸಂಪರ್ಕ ಕಚೇರಿಗೆ ಆಗಮಿಸಿದ ರೈತರು ಸಿಎಂ ಬಸವರಾಜ ಬೊಮ್ಮಾಯಿ ರೈತ ಸಂಘಟನೆಗಳ ಬೇಡಿಕೆ ಈಡೇರಿಸುವದಾಗಿ ಭರವಸೆ ನೀಡಿದ್ದರು. ಆದರೆ ಬೇಡಿಕೆಗಳು ಬೇಡಿಕೆಗಳಾಗಿ ಉಳಿದಿವೆ ಎಂದು ಆರೋಪಿಸಿದರು.

Lipi 19 May 2022, 11:04 am
ಹಾವೇರಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದಲ್ಲಿರುವ ವಿವಿಧ ರೈತ ಸಂಘಟನೆಗಳು ಈಗಾಗಲೇ ಹಲವು ಬಾರಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಮನವಿ ಸಲ್ಲಿಸಿವೆ.
Vijaya Karnataka Web ಸಿಎಂ ಕಚೇರಿಗೆ ಮುತ್ತಿಗೆ


ಆದರೆ ರೈತ ಸಂಘಟನೆಗಳ ಬೇಡಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಈಡೇರಿಸಿಲ್ಲ ಎಂದು ಆರೋಪಿಸಿ ಬುಧವಾರ ವಿವಿಧ ರೈತ ಸಂಘಟನೆಗಳು ಸಿಎಂ ಬೊಮ್ಮಾಯಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದವು. ರಾಜ್ಯದಲ್ಲಿರುವ ವಿವಿಧ ರೈತ ಸಂಘಟನೆಗಳು ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿರುವ ಸಿಎಂ ಹಾಗೂ ಶಿಗ್ಗಾವಿ ಶಾಸಕ ಸಂಪರ್ಕ ಕಚೇರಿ ಇರುವ ತಾಲೂಕು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಲು ರೈತರು ಮುಂದಾದರು.

ಮುತ್ತಿಗೆ ಕಾರ್ಯಕ್ರಮಕ್ಕೂ ಮುನ್ನ ರಾಜ್ಯದ ವಿವಿಧ ರೈತ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಿಗ್ಗಾವಿ ಎಪಿಎಂಸಿಯಿಂದ ಸಿಎಂ ಕಚೇರಿಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎಪಿಎಂಸಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ರೈತರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನಂತರ ಸಿಎಂ ಹಾಗೂ ಶಾಸಕ ಸಂಪರ್ಕ ಕಚೇರಿಗೆ ಆಗಮಿಸಿದ ರೈತರು ಸಿಎಂ ಬಸವರಾಜ್ ಬೊಮ್ಮಾಯಿ ರೈತ ಸಂಘಟನೆಗಳ ಬೇಡಿಕೆ ಈಡೇರಿಸುವದಾಗಿ ಭರವಸೆ ನೀಡಿದ್ದರು. ಆದರೆ ಬೇಡಿಕೆಗಳು ಬೇಡಿಕೆಗಳಾಗಿ ಉಳಿದಿವೆ ಎಂದು ಆರೋಪಿಸಿದರು.
ಮೀಸಲಾತಿ ಕೊಡದಿದ್ದರೆ, ಸಿಎಂ ಮನೆ ಮುಂದೆ ಉಪವಾಸ ಸತ್ಯಾಗ್ರಹ: ಬಸವಜಯಮೃತ್ಯುಂಜಯ ಸ್ವಾಮೀಜಿ
ಕೇಂದ್ರ ಸರ್ಕಾರ ಜಾರಿಗೆ ತಂದು ವಾಪಸ್ ಪಡೆದಿರುವ ಮೂರು ರೈತವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಕೇಂದ್ರ ಸರ್ಕಾರವೇ ರೈತರು ಹೋರಾಟಕ್ಕೆ ಮಣಿದು ಕೃಷಿ ವಿರೋಧಿ ಕಾಯ್ದೆ ವಾಪಸ್ ಪಡೆದಿದೆ. ಅದರಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ, ಭೂ ಸ್ವಾಧೀನ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆ ವಾಪಸ್ ಪಡೆಯುವಂತೆ ರೈತರು ಒತ್ತಾಯಿಸಿದರು. ಭತ್ತ, ಮೆಕ್ಕೆಜೋಳ, ರಾಗಿ ಸೇರಿದಂತೆ ರೈತರ ಬೆಳೆದ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕು ಮತ್ತು ಖರೀದಿ ಕೇಂದ್ರ ತೆರೆಯಬೇಕು ಎಂದು ರೈತರು ಒತ್ತಾಯಿಸಿದರು. ಬೆಲೆಸಾಲ ಪರಿಹಾರ ಸಿಕ್ಕಿಲ್ಲಾ ಬೆಳೆವಿಮೆ ಬಂದಿಲ್ಲಾ ಎಂದು ಆರೋಪಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ ಈ ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ರೈತರ ಮುತ್ತಿಗೆ ಹಿನ್ನೆಲೆಯಲ್ಲಿ ಶಿಗ್ಗಾವಿ ನಗರ ಸಿಎಂ ಸಂಪರ್ಕ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ