ಆ್ಯಪ್ನಗರ

ತಂದೆ-ತಾಯಿಯರ ಪಾದ ಪೂಜೆ

ಅಕ್ಕಿಆಲೂರು: ಇಲ್ಲಿನ ಗಂಗಪ್ಪ ಧಾರವಾಡ ಗ್ರಾಮೀಣ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಕುಲ ಸಂಭ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ತಂದೆ-ತಾಯಿಯರ ಪಾದಪೂಜೆ ಮಾಡಿಸುವ ವಿನೂತನ ಕಾರ್ಯಕ್ರಮ ಶನಿವಾರ ನಡೆಯಿತು.

Vijaya Karnataka 13 Jan 2019, 5:00 am
ಅಕ್ಕಿಆಲೂರು: ಇಲ್ಲಿನ ಗಂಗಪ್ಪ ಧಾರವಾಡ ಗ್ರಾಮೀಣ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಕುಲ ಸಂಭ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ತಂದೆ-ತಾಯಿಯರ ಪಾದಪೂಜೆ ಮಾಡಿಸುವ ವಿನೂತನ ಕಾರ್ಯಕ್ರಮ ಶನಿವಾರ ನಡೆಯಿತು.
Vijaya Karnataka Web father mothers foot worship
ತಂದೆ-ತಾಯಿಯರ ಪಾದ ಪೂಜೆ


ಆತ್ಮೋನ್ನತಿಯ ದಿವಾಳಿತನದ ಅಂಚಿನಲ್ಲಿರುವ ಇಂದಿನ ದಿನಗಳಲ್ಲಿ ಗುರುಕುಲ ಹಮ್ಮಿಕೊಂಡಿದ್ದ ಕಾರ್ಯಕ್ರಮ ಇಂದಿಗೂ ನಮ್ಮ ಪುರಾತನ ಶ್ರೀಮಂತ ಸಂಸ್ಕೃತಿ ಜೀವಂತವಾಗಿದೆ ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಲ್ಲಿ ಯಶಸ್ವಿಯಾಯಿತು.

ಹೆತ್ತವರನ್ನು ಪೂಜಿಸಿ ತಮ್ಮ ಮುಂದಿನ ಸಾಧನೆಗಳಿಗೆ ಆಶೀರ್ವಾದ ಪಡೆಯುವ ಗುರಿಯನ್ನಿಟ್ಟುಕೊಂಡು 7 ನೇ ತರಗತಿಯ ವಿದ್ಯಾರ್ಥಿಗಳು ಇಲ್ಲಿನ ವಿರಕ್ತಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಂತ್ರಘೋಷಗಳ ನಡುವೆ ಹಿಂದೂ ವಿಧಿವಿಧಾನಗಳಂತೆ ಸಂಪ್ರದಾಯ ಬದ್ಧವಾಗಿ ತಂದೆ-ತಾಯಿಯರ ಪಾದ ಪೂಜೆ ನೆರವೇರಿಸಿದರು. ತಮ್ಮ ಮಕ್ಕಳಿಂದ ಪಾದ ಪೂಜೆ ಮಾಡಿಸಿಕೊಂಡ ಹೆತ್ತವರ ಹೃದಯದಲ್ಲಿ ಧನ್ಯತಾಭಾವ, ಕಣ್ಣಂಚಿನಲ್ಲಿ ಆನಂದಭಾಷ್ಪ ಜಿನುಗಿತು. ಅನುಭವ ಹಂಚಿಕೊಳ್ಳಲು ಬಂದ ಹೆತ್ತವರು ಗದ್ಗದಿತರಾಗಿ ತಮ್ಮ ಮಕ್ಕಳು ಸಂಸ್ಕಾರವಂತರಾಗಿ ಸಮಾಜಕ್ಕೆ ನೆರವಾಗಲಿ ಎಂದು ಹಾರೈಸಿದರು.

ಸಾನ್ನಿಧ್ಯ ವಹಿಸಿದ್ದ ಶಿವಬಸವ ಸ್ವಾಮೀಜಿ ಆಶೀರ್ವಚನ ನೀಡಿ ಇಂದು ಮಕ್ಕಳಿಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಬಗ್ಗೆ ತಿಳಿ ಹೇಳಬೇಕಾದದ್ದು ಬಹಳ ಅಗತ್ಯವಾಗಿದೆ. ಹೆತ್ತವರು ತಮ್ಮ ಬದುಕಿನ ಜಂಜಾಟಗಳ ನಡುವೆ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಮರೆಯುತ್ತಿದ್ದಾರೆ. ಇಂಥÜ ಸಂದರ್ಭದಲ್ಲಿ ಈ ಗುರುಕುಲ ಓದು-ಬರಹ ಕಲಿಸುವುದರ ಜತೆ ಸುಸಂಸ್ಕೃತ ಪ್ರಜೆಗಳನ್ನು ಸಿದ್ಧಗೊಳಿಸುವುದು ತನ್ನ ಕರ್ತವ್ಯವೆಂದು ಭಾವಿಸಿ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಗುರುಕುಲದ ಅಧ್ಯಕ್ಷ ನಾಗರಾಜ್‌ ಪಾವಲಿ, ಗೌರವ ಕಾರ್ಯದರ್ಶಿ ವೀರಣ್ಣ ಸಾಲವಟಗಿ, ನಿರ್ದೇಶಕರಾದ ಶಿವಕುಮಾರ ದೇಶಮುಖ, ಮಲ್ಲಿಕಾರ್ಜುನ ಕಂಬಾಳಿ, ಸಿದ್ದಲಿಂಗೇಶ ತುಪ್ಪದ, ಆಡಳಿತಾಧಿಕಾರಿ ಸುರೇಂದ್ರ ಕೆರೆಮ್ಮನವರ, ಮುಖ್ಯೋಪಾಧ್ಯಾಯ ವಿಜಯಕುಮಾರ ಟಿ.ಪಿ. ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ