ಆ್ಯಪ್ನಗರ

ನೀರಿಗಾಗಿ ಹಾಹಾಕಾರ ಸರಣಿಗೆ

ರಾಣೇಬೆನ್ನೂರ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ. ಆದರೆ ತಾಲೂಕಿನ ಮೆಡ್ಲೇರಿ ಜಿಪಂ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಬಹುತೇಕ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದಕ್ಕೆ ರಾಹುತನಕಟ್ಟಿಯಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವೇ ಪ್ರತ್ಯಕ್ಷ ಸಾಕ್ಷಿಯಾಗಿದೆ.

Vijaya Karnataka 30 Apr 2019, 5:00 am
ರಾಣೇಬೆನ್ನೂರ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ. ಆದರೆ ತಾಲೂಕಿನ ಮೆಡ್ಲೇರಿ ಜಿಪಂ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಬಹುತೇಕ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದಕ್ಕೆ ರಾಹುತನಕಟ್ಟಿಯಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವೇ ಪ್ರತ್ಯಕ್ಷ ಸಾಕ್ಷಿಯಾಗಿದೆ.
Vijaya Karnataka Web HVR-29RNR1


ಗ್ರಾಮದಲ್ಲಿ ಸುಮಾರು ಎರಡು ಸಾವಿರ ಜನಸಂಖ್ಯೆಯಿದ್ದು, ಜನರ ಬಳಕೆಗಾಗಿ ಗ್ರಾಮದ ಬಳಿಯ ಮೆಡ್ಲೇರಿ ಕೆರೆಯಲ್ಲಿನ ಎರಡು ಬೋರ್‌ವೆಲ್‌ಗಳ ಮೂಲಕ ನೀರನ್ನು ತಂದು ಓವರ್‌ಹೆಡ್‌ ಟ್ಯಾಂಕ್‌ ಮೂಲಕ ಪೂರೈಸಲಾಗುತ್ತಿದೆ. ಇದಲ್ಲದೆ ಎರಡು ದಿನಕ್ಕೊಂದು ಬಾರಿಯಂತೆ ನದಿ ನೀರನ್ನು ಒದಗಿಸಲಾಗುತ್ತಿದೆ.

ಗ್ರಾಮದ ಜನರಿಗೆ ಕುಡಿಯಲು ಶುದ್ಧ ನೀರು ಒದಗಿಸಲು ಭೂಸೇನಾ ನಿಗಮದ ವತಿಯಿಂದ 2016ರಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಲಾಯಿತು. ಗ್ರಾಮಸ್ಥರ ಪ್ರಕಾರ ಘಟಕ ಉದ್ಘಾಟನೆ ಭಾಗ್ಯ ಕಂಡದ್ದೆ ಸಮಾಧಾನಕರ ಸಂಗತಿ. ಆದರೆ ಅದು ಸರಿಯಾಗಿ ಕಾರ್ಯನಿರ್ವಹಿಸಲೇ ಇಲ್ಲ.

ಎರಡು ಬಾರಿ ರಿಪೇರಿ: ಗ್ರಾಮದ ಶುದ್ಧ ನೀರಿನ ಘಟಕ ಎರಡು ಬಾರಿ ಹಾಳಾಗಿದ್ದರೂ ದುರಸ್ತಿ ಮಾಡಿಸಲಾಯಿತು. ಆದರೆ ಅದನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಗ್ರಾಪಂ ವಿಫಲವಾಗಿದ್ದರಿಂದ ಸಮಸ್ಯೆ ಉಂಟಾಗುತ್ತಿದೆ ಎಂಬುದು ಗ್ರಾಮೀಣ ನೀರು ಪೂರೈಕೆ ಇಲಾಖೆ ಅಧಿಕಾರಿಗಳ ಹೇಳಿಕೆಯಾಗಿದೆ.

ವಾಟರ್‌ಮನ್‌ ನಿರ್ಲಕ್ಷ ಆರೋಪ: ನೀರಿನ ಘಟಕವು ಎರಡು ಸಾವಿರ ಲೀಟರ್‌ ಕಚ್ಚಾ ನೀರನ್ನು ಶುದ್ಧೀಕರಿಸುವ ಸಾಮರ್ಥ್ಯ‌ ಹೊಂದಿದೆ. ಆದರೆ ವಾಟರ್‌ಮನ್‌ ನಿರ್ಲಕ್ಷ ್ಯದಿಂದಾಗಿ ಗ್ರಾಮದಲ್ಲಿನ ನೀರಿನ ಘಟಕ ಸರಿಯಾಗಿ ಕಾರ್ಯನಿರ್ವಹಿಸದೇ ಹಾಳು ಬಿದ್ದಿದೆ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮೀಣ ನೀರು ಪೂರೈಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ಒಟ್ಟಾರೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾಗಿದ್ದ ಘಟಕವು ನಿರ್ವಹಣೆ ಕೊರತೆಯಿಂದ ತುಕ್ಕು ಹಿಡಿಯುವಂತಾಗಿರುವುದು ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ