ಆ್ಯಪ್ನಗರ

ಪರಿಶಿಷ್ಟರ ಕಾಲೊನಿ ಅಭಿವೃದ್ಧಿಗೆ ಹಣ

ಹಿರೇಕೆರೂರು : ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೊನಿಗಳಲ್ಲಿವಿದ್ಯುತ್‌ ದ್ವೀಪ ಅಳವಡಿಕೆ, ಕಾಂಕ್ರೀಟ್‌ ರಸ್ತೆ ಹಾಗೂ ಪಕ್ಕಾ ಗಟಾರ ನಿರ್ಮಾಣದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 5 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಮಾಜಿ ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.

Vijaya Karnataka 19 Oct 2019, 5:00 am
ಹಿರೇಕೆರೂರು : ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೊನಿಗಳಲ್ಲಿವಿದ್ಯುತ್‌ ದ್ವೀಪ ಅಳವಡಿಕೆ, ಕಾಂಕ್ರೀಟ್‌ ರಸ್ತೆ ಹಾಗೂ ಪಕ್ಕಾ ಗಟಾರ ನಿರ್ಮಾಣದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 5 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಮಾಜಿ ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.
Vijaya Karnataka Web funds for the development of the colony of the scheduled castes
ಪರಿಶಿಷ್ಟರ ಕಾಲೊನಿ ಅಭಿವೃದ್ಧಿಗೆ ಹಣ


ಅವರು ಪಟ್ಟಣದಲ್ಲಿಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕಾಲೊನಿಗಳಲ್ಲಿವಿದ್ಯುತ್‌ ದ್ವೀಪ ಅಳವಡಿಸಲು, ಕಾಂಕ್ರೀಟ್‌ ರಸ್ತೆ ಹಾಗೂ ಪಕ್ಕಾ ಗಟಾರ ನಿರ್ಮಿಸಲು ಅನುದಾನ ನೀಡುವಂತೆ 10-10-2019ರಂದು ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದೆ. ಈ ಹಿನ್ನೆಲೆಯಲ್ಲಿ2019-20ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿ 5 ಕೋಟಿ ರೂ.ಗೆ ಅನುಮೋದನೆ ದೊರೆತಿದೆ. ಈ ಅನುದಾನದಲ್ಲಿಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಮಾಡಿದ್ದಾರೆ ಎಂದರು.

ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕುಗಳನ್ನು ಸರ್ವಾಂಗೀಣ ಅಭಿವೃದ್ಧಿ ಗುರಿ ಹೊಂದಿದ್ದೇನೆ. ಅನುದಾನ ಬಿಡುಗಡೆ ಮಾಡುತ್ತಿರುವ ಮುಖ್ಯಮಂತ್ರಿಗೆ ಹಾಗೂ ರಾಜ್ಯ ಸರಕಾರಕ್ಕೆ ತಾಲೂಕಿನ ಜನರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿಆರ್‌.ಎನ್‌.ಗಂಗೋಳ್‌, ಜಿ.ಪಿ.ಪ್ರಕಾಶ, ರುದ್ರಗೌಡ ನೀಲನಗೌಡ್ರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ