ಆ್ಯಪ್ನಗರ

ಹಾನಗಲ್ಲ ಪುರಸಭೆ ಕೈ ವಶ

ಹಾನಗಲ್ಲ: ಹಾನಗಲ್ಲಪುರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ ಮತ್ತು ಮಹೇಶ ಪವಾಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

Vijaya Karnataka 10 Nov 2020, 5:00 am
ಹಾನಗಲ್ಲ: ಹಾನಗಲ್ಲಪುರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ ಮತ್ತು ಮಹೇಶ ಪವಾಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
Vijaya Karnataka Web 09HGL1_23
ಹಾನಗಲ್ಲಪುರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಅಧ್ಯಕ್ಷ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ, ಉಪಾಧ್ಯಕ್ಷ ಮಹೇಶ ಪವಾಡಿ ಅವರನ್ನು ಕಾಂಗ್ರೆಸ್‌ನ ಸದಸ್ಯರು ಅಭಿನಂದಿಸಿದರು.


ಸೋಮವಾರ ಇಲ್ಲಿನ ಪುರಸಭೆ ಸಭಾಂಗಣದಲ್ಲಿನಡೆದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಸುಗಮವಾಯಿತು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್‌ ಪ್ರಕ್ರಿಯೆಗಳನ್ನು ನೆರವೇರಿಸಿದರು.

23 ಸದಸ್ಯ ಬಲದ ಪುರಸಭೆಯಲ್ಲಿ19 ಸದಸ್ಯರನ್ನು ಹೊಂದಿದ ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸಿದೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮೀಸಲಾಗಿದ್ದರಿಂದ ಆಕಾಂಕ್ಷಿಗಳ ಸಂಖ್ಯೆ ಅಧಿಕವಾಗಿತ್ತು. ಪ್ರಬಲ ಆಕಾಂಕ್ಷಿಗಳ ಪೈಪೋಟಿಯನ್ನು ಹತೋಟಿಗೆ ಪಡೆದ ಕಾಂಗ್ರೆಸ್‌ ವರಿಷ್ಠರು ಅಂತಿಮವಾಗಿ ಅವಿರೋಧ ಆಯ್ಕೆ ನಡೆಯುವಲ್ಲಿಯಶಸ್ವಿಯಾದರು.

ನೂತನ ಅಧ್ಯಕ್ಷ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ ಮಾತನಾಡಿ, ಮೂಲ ಸೌಲಭ್ಯಗಳ ಅಭಿವೃದ್ಧಿ ಜೊತೆಯಲ್ಲಿಪಟ್ಟಣದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದರು. ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಎಸ್‌.ಪಾಟೀಲ, ಜಿ.ಪಂ ಸದಸ್ಯ ಟಾಕನಗೌಡ ಪಾಟೀಲ ಮತ್ತು ಕಾಂಗ್ರೆಸ್‌ನ ಪುರಸಭೆ ಸದಸ್ಯರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ