ಆ್ಯಪ್ನಗರ

ನೇತ್ರದಾನಕ್ಕೆ ಸಹಿ ಮಾಡಿದ ಹನುಮಂತ

ಸವಣೂರು: ಜುಲೈ 29 ರಂದು ಸವಣೂರು ಪಟ್ಟಣದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕ ಘಟಕದ ವತಿಯಿಂದ ತಾಲೂಕ ಮಟ್ಟದ ಪತ್ರಿಕಾ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿ ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ನೇತ್ರದಾನ ವಾಗ್ದಾನ ಪತ್ರ ಸಹಿ ಅಭಿಯಾನದಲ್ಲಿ ಸರಿಗಮಪ ಖ್ಯಾತಿಯ ಹನುಮಂತ ಲಮಾಣಿ ರವಿವಾರ ಪಾಲ್ಗೊಂಡು, ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನೇತ್ರದಾನಿಗಳಾದರು.

Vijaya Karnataka 22 Jul 2019, 5:00 am
ಸವಣೂರು: ಜುಲೈ 29 ರಂದು ಸವಣೂರು ಪಟ್ಟಣದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕ ಘಟಕದ ವತಿಯಿಂದ ತಾಲೂಕ ಮಟ್ಟದ ಪತ್ರಿಕಾ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿ ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ನೇತ್ರದಾನ ವಾಗ್ದಾನ ಪತ್ರ ಸಹಿ ಅಭಿಯಾನದಲ್ಲಿ ಸರಿಗಮಪ ಖ್ಯಾತಿಯ ಹನುಮಂತ ಲಮಾಣಿ ರವಿವಾರ ಪಾಲ್ಗೊಂಡು, ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನೇತ್ರದಾನಿಗಳಾದರು.
Vijaya Karnataka Web HVR-21SVR1A


ನಂತರ ಮಾತನಾಡಿದ ಅವರು, ಸವಣೂರು ತಾಲೂಕ ಪತ್ರಕರ್ತರು ನೇತ್ರದಾನ ಕೈಗೊಳ್ಳುವ ಮೂಲಕ ಸಾಮಾಜಿಕ ಕಾರ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ನಾನು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕುವ ಮೂಲಕ ನನ್ನ ಮರಣ ನಂತರ ಕಣ್ಣುಗಳನ್ನು ದಾನವಾಗಿ ನೀಡಲು ಒಪ್ಪಿಗೆ ಸೂಚಿಸಿದ್ದೇನೆ. ಆದ್ದರಿಂದ, ಈ ಕಾರ್ಯದಲ್ಲಿ ಸರ್ವರು ಪಾಲ್ಗೊಂಡಲ್ಲಿ ಮಾತ್ರ ಅಂದರ ಬಾಳಿಗೆ ಬೆಳಕು ನೀಡುವ ಮೂಲಕ ಅಂಧತ್ವ ನಿವಾರಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಶಿಕ್ಷ ಕ ಎನ್‌.ಕೆ.ಪಾಟೀಲ, ಪತ್ರಕರ್ತ ಆನಂದ ಮತ್ತಿಗಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಗಣೇಶಗೌಡ ಪಾಟೀಲ, ಶಂಕ್ರಯ್ಯ ಹಿರೇಮಠ, ಯೋಗೇಂದ್ರ ಜಂಬಗಿ ಹಾಗೂ ಇತರರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಬಾಗ್ಯಜ್ಯೋತಿ ನಾಗನಗೌಡ ಪಾಟೀಲ, ವೆಂಕಟೇಶ ಮಲ್ಲೇಶಪ್ಪ ಲಮಾಣಿ ಹಾಗೂ ಇತರರು ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿದರು.

ಡಿಸಿ ಸಹಿ: ಸವಣೂರು ಪಟ್ಟಣದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸವಣೂರು ತಾಲೂಕ ಮಟ್ಟದ ಪತ್ರಿಕಾ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿ ಎಂ.ಎಂ.ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ನೇತ್ರದಾನ ವಾಗ್ದಾನ ಪತ್ರ ಸಹಿ ಅಭಿಯಾನದಲ್ಲಿ ಪಾಲ್ಗೊಂಡು, ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬೋಯಾರ್‌ ಹರ್ಷಲ್‌ ನಾರಾಯಣರಾವ್‌, ಅಪರ ಜಿಲ್ಲಾಧಿಕಾರಿ (ಪ್ರಭಾರ) ತಿಪ್ಪೆಸ್ವಾಮಿ, ತಹಸೀಲ್ದಾರ್‌ ವಿ.ಡಿ.ಸಜ್ಜನ್‌ ಅವರು ಸಹ ನೇತ್ರದಾನ ವಾಗ್ದಾನ ಪತ್ರಕ್ಕೆ ಸಹಿ ಹಾಕಿ ಮಾತನಾಡಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ