ಆ್ಯಪ್ನಗರ

ಬೆಂಗಳೂರಿನಲ್ಲಿ ಹಾವೇರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹಾವೇರಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಹಾಗೂ ರಾಜ್ಯ ಅಧಿವೇಶನದಲ್ಲಿಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದವರು ಪ್ರತಿಭಟನೆ ನಡೆಸಿದರು.

Vijaya Karnataka 26 Sep 2020, 5:00 am
ಹಾವೇರಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಹಾಗೂ ರಾಜ್ಯ ಅಧಿವೇಶನದಲ್ಲಿಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದವರು ಪ್ರತಿಭಟನೆ ನಡೆಸಿದರು.
Vijaya Karnataka Web 24 MANJU 8_23
ಬೆಂಗಳೂರಿನ ಮೌರ್ಯ ಸರ್ಕಲ್ಲಿನಲ್ಲಿನಡೆದ ಬೃಹತ್‌ ಪ್ರತಿಭಟನೆಯಲ್ಲಿಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾವೇರಿ ಜಿಲ್ಲಾಘಟಕದವರು ಭಾಗವಹಿಸಿದ್ದರು.


ಬೆಂಗಳೂರಿನ ಮೌರ್ಯ ಸರ್ಕಲ್ಲಿನಲ್ಲಿನಡೆದ ಬೃಹತ್‌ ಪ್ರತಿಭಟನೆಯಲ್ಲಿಹಾವೇರಿ ಜಿಲ್ಲೆಯಿಂದ 50ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಡಿಎಸ್‌ಎಸ್‌ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, ಒಳ ಮೀಸಲಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ ಪೀಠವು ಇತ್ತೀಚೆಗೆ ನೀಡಿರುವ ತೀರ್ಪನ್ನು ಡಿಎಸ್‌ಎಸ್‌ ಸ್ವಾಗತಿಸುತ್ತದೆ. ಪರಿಶಿಷ್ಟರ ಅಭಿವೃದ್ಧಿಗಾಗಿ ಒಳಮೀಸಲು ಅಗತ್ಯವಾಗಿದೆ. ಅಸ್ಪೃಶ್ಯ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿಮೀಸಲು ಕೋಟಾದಡಿ ಸರಕಾರಿ ಉದ್ಯೋಗ ಪಡೆದಿದ್ದಾರೆ. ನಮಗೆ ನ್ಯಾಯ ಸಿಗದಂತಹ ಅಘೋಷಿತ ಪರಿಸ್ಥಿತಿ ಕಂಡು ಬರುತ್ತಿದೆ.

ಅಸ್ಪೃಶ್ಯ ಜಾತಿಗಳಾದ ಮಾದಿಗ ಹಾಗೂ ಹೊಲೆಯ ಮತ್ತು ಅಸಹಾಯಕ ಅದರಲ್ಲೂಮೂರು ಕಾಸಿನ ನೆರವು ಸಿಗದ ಅಲೆಮಾರಿ ಬುಡಕಟ್ಟು ಸೂಕ್ಷತ್ರ್ಮ ಮತ್ತು ಅತೀ ಸೂಕ್ಷತ್ರ್ಮ ಸಮುದಾಯಗಳಿಗೆ ಸಿಗಬೇಕಾದ ಮೀಸಲನ್ನು ತಾವೇ ಕಬಳಿಸುತ್ತಿದ್ದಾರೆ. ಒಳ ಮೀಸಲು ಜಾರಿ ಆದರೆ ಸಾಮಾಜಿಕ ನ್ಯಾಯ ಸಿಗಬಹುದು. ಆದ್ದರಿಂದ ಎ.ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡಬೇಕೆಂದು ಉಡಚಪ್ಪ ಮಾಳಗಿ ಸರಕಾರಕ್ಕೆ ಒತ್ತಾಯಿಸಿದರು.

ಡಿಎಸ್‌ಎಸ್‌ ರಾಜ್ಯ ಸಂಚಾಲಕ ಸತ್ಯ ಭದ್ರವತಿ, ಎಸ್‌.ಎಂ.ಬಳ್ಳಾರಿ, ಶ್ರೀಧರ ಕಲವೀರ, ಎಸ್‌.ಎನ್‌.ಮಲ್ಲಪ್ಪ, ಮಾಲತೇಶ ಯಲ್ಲಾಪೂರ, ನಿಂಗಣ್ಣ ಕಡೂರ ಸೇರಿದಂತೆ ಡಿಎಸ್‌ಎಸ್‌ ಮುಖಂಡರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ