ಆ್ಯಪ್ನಗರ

ಗುಜರಾತ್ ಸಿಎಂ ಆಗಮನ: ಗರ್ಭಿಣಿ ಇದ್ದ ಆಂಬ್ಯುಲೆನ್ಸ್‌‌ ತಡೆದ ಪೊಲೀಸರು!

ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಆಗಮನ ಹಿನ್ನೆಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್‌ನಲ್ಲಿ 5 ನಿಮಿಷಗಳ ಕಾಲ ಆಂಬ್ಯುಲೆನ್ಸ್ ಸಿಕ್ಕಿಹಾಕಿಕೊಂಡ ಘಟನೆ ಹಾವೇರಿಯ ಎಪಿಎಂಸಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

ವಿಕ ಸುದ್ದಿಲೋಕ 19 Jun 2017, 4:09 pm
ಹಾವೇರಿ: ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ಆಗಮನ ಹಿನ್ನೆಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್‌ನಲ್ಲಿ 5 ನಿಮಿಷಗಳ ಕಾಲ ಆಂಬ್ಯುಲೆನ್ಸ್ ಸಿಕ್ಕಿಹಾಕಿಕೊಂಡ ಘಟನೆ ಹಾವೇರಿಯ ಎಪಿಎಂಸಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
Vijaya Karnataka Web havery police stop ambulance for gujarat cm
ಗುಜರಾತ್ ಸಿಎಂ ಆಗಮನ: ಗರ್ಭಿಣಿ ಇದ್ದ ಆಂಬ್ಯುಲೆನ್ಸ್‌‌ ತಡೆದ ಪೊಲೀಸರು!


ಈ ಆಂಬ್ಯುಲೆನ್ಸ್‌ನಲ್ಲಿ ಕರ್ಜಗಿ ಗ್ರಾಮದ ಆಫ್ರೀನ್ ಎಂಬ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು.

ನಗರದ ಮಾಗಾವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ರೂಪಾನಿ ಅವರು ಮಾಗಾವಿ ಕಲ್ಯಾಣ ಮಂಟಪಕ್ಕೆ ಆಗಮಿಸುವ 10 ನಿಮಿಷಗಳ ಮುಂಚೆಯೇ ಪೊಲೀಸರು ಸಾರ್ವಜನಿಕರ ವಾಹನಗಳನ್ನು ತಡೆದಿದ್ದರು.

ನಗರದ ಪ್ರವಾಸಿ ಮಂದಿರದಿಂದ ಕಾರ್ಯಕ್ರಮದ ಸ್ಥಳಕ್ಕೆ ಸಿಎಂ ರೂಪಾನಿ ಬರೋದು ಐದು ನಿಮಿಷ ತಡವಾಗಿದ್ದರಿಂದ ಅಂಬ್ಯುಲೆನ್ಸ್‌ಗೆ ಪೊಲೀಸರು ದಾರಿ ಮಾಡಿಕೊಟ್ಟರು.

ನಿತ್ಯ ಒಂದಿಲ್ಲೊಂದು ಹಗರಣಗಳೇ ಯುಪಿಎ ಸರಕಾರದ ಸಾಧನೆ

ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ, ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಕೇಂದ್ರ ಸರಕಾರದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನತೆಯ ಲೆಕ್ಕ ಚುಕ್ತಾ ಮಾಡಿದೆ ಎನ್ನುವುದಕ್ಕೆ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಸಾಕ್ಷಿಯಾಗಿದೆ ಎಂದರು.

'ನಿತ್ಯ ಒಂದಿಲ್ಲೊಂದು ಹಗರಣಗಳೇ ಹತ್ತು ವರ್ಷದ ಯುಪಿಎ ಸರಕಾರದ ಸಾಧನೆ. ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ವಿಷಯದಲ್ಲಿ ಕಾಂಗ್ರೆಸ್ ಅನಗತ್ಯ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ