ಆ್ಯಪ್ನಗರ

ಮದ್ಯ ಸೇವಿಸಿ ಶಾಲೆಗೆ ಬಂದ ಮುಖ್ಯ ಶಿಕ್ಷಕ ಅಮಾನತು

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಆರೋಪವೂ ಸೇರಿದಂತೆ ಹಲವು ದೂರುಗಳ ಹಿನ್ನೆಲೆಯಲ್ಲಿ ಸಮೀಪದ ಶಂಕರಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಿ.ಜಿ.ಮಾದರ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಅಂದಾನೆಪ್ಪ ವಡಗೇರಿ ಆದೇಶ ಹೊರಡಿಸಿದ್ದಾರೆ.

Vijaya Karnataka 12 Jun 2018, 5:00 am
ಅಕ್ಕಿಆಲೂರು: ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಆರೋಪವೂ ಸೇರಿದಂತೆ ಹಲವು ದೂರುಗಳ ಹಿನ್ನೆಲೆಯಲ್ಲಿ ಸಮೀಪದ ಶಂಕರಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಿ.ಜಿ.ಮಾದರ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಅಂದಾನೆಪ್ಪ ವಡಗೇರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web Alchohal


ಬಿ.ಜಿ.ಮಾದರ ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ. ನಗದು ಪುಸ್ತಕ ಸರಿಯಾಗಿ ಬರೆದಿಲ್ಲ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅನುಷ್ಠಾನದಲ್ಲಿಯೂ ವೈಫಲ್ಯ ಎದ್ದು ಕಾಣುತ್ತಿದೆ. ವಿದ್ಯಾರ್ಥಿಗಳಿಗೆ ಪಾಠವನ್ನೂ ಸರಿಯಾಗಿ ಮಾಡುತ್ತಿಲ್ಲ. ಇದಲ್ಲದೇ ಕುಡಿದು ಶಾಲೆ ಬರುತ್ತಾರೆ ಎನ್ನುವ ಆರೋಪವೂ ಈ ಮುಖ್ಯೋಪಾಧ್ಯಾಯರ ಮೇಲಿದೆ. ಶಾಲೆಯ ಎಸ್‌ಡಿಎಂಸಿ ದೂರಿನ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷ ಣಾಧಿಕಾರಿ ನೀಡಿರುವ ವರದಿ ಆಧರಿಸಿ ಡಿಡಿಪಿಐ ಅಮಾನತು ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ