ಆ್ಯಪ್ನಗರ

ಸಂತ್ರಸ್ತರ ಸಮಸ್ಯೆ ಆಲಿಸಿದ ಎಚ್ಕೆ

ಹಾವೇರಿ: ಜಿಲ್ಲೆಯ ವರದಾ ನದಿ ಪ್ರವಾಹಕ್ಕೆ ಒಳಗಾದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಹಿರಿಯ ಮುಖಂಡ ಎಚ್‌.ಕೆ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

Vijaya Karnataka 15 Aug 2019, 5:00 am
ಹಾವೇರಿ: ಜಿಲ್ಲೆಯ ವರದಾ ನದಿ ಪ್ರವಾಹಕ್ಕೆ ಒಳಗಾದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಹಿರಿಯ ಮುಖಂಡ ಎಚ್‌.ಕೆ. ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
Vijaya Karnataka Web HVR-14 HAVERI 7


ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೂ ಜಿಲ್ಲೆಯ ಶಿಗ್ಗಾವಿ, ಸವಣೂರ, ಹಾವೇರಿ, ಹಾನಗಲ್ಲ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.

ಬೆಳಗ್ಗೆ 9 ಗಂಟೆಗೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾಗನೂರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳಿ ವಾಸ್ತವ ಸ್ಥಿತಿಯನ್ನು ಸಮಸ್ಯೆಗಳನ್ನು ಕೇಳಿದರು. ಅವರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಜಿಲ್ಲಾ ಕೇಂದ್ರ ಹಾವೇರಿಗೆ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈದುಂಬಿ ಹರಿಯುತ್ತಿರುವ ವರದೆಯನ್ನು ವೀಕ್ಷಣೆ ಮಾಡಿದರು. ವರದಾ ನದಿ ಪ್ರವಾಹಕ್ಕೆ ಒಳಗಾದ ಹಾವೇರಿ ತಾಲೂಕಿನ ಕರ್ಜಗಿ, ಸವಣೂರ ತಾಲೂಕಿನ ವರದಾಹಳ್ಳಿ, ಹಾನಗಲ್ಲ ತಾಲೂಕಿನ ಕೂಡಲ, ಅಲ್ಲಾಪುರ ಶಿಗ್ಗಾವಿಯ ನಾಗರನೂರ ಕೆರೆ ಸೇರಿದಂತೆ ನಾನಾ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಹಾವೇರಿ ತಾಲೂಕಿನ ಕರ್ಜಗಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಹಾಸಿಗೆ ಹೊದಿಕೆ ನೀಡಿ ಧೈರ್ಯ ತುಂಬಿದರು. ಮನೆ ಕಳೆದುಕೊಂಡವರಿಗೆ ಮನೆ ಕೊಡಿಸುವ ಭರವಸೆ ನೀಡಿದರು. ಬೆಳೆ ಹಾನಿ, ಮನೆ ಕುಸಿತ ಸೇರಿದಂತೆ ಮಾಹಿತಿ ಕಲೆ ಹಾಕಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಹಿರಿಯ ಮುಖಂಡರಾದ .ಡಿ.ಆರ್‌. ಪಾಟೀಲ, ಐ.ಜಿ. ಸನ್ನದಿ, ಜಿ.ಪಂ. ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಎಂ.ಎಂ. ಮೈದೂರ ಸೇರಿದಂತೆ ಕಾರ್ಯಕರ್ತರು ಜತೆಯಲ್ಲಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ