ಆ್ಯಪ್ನಗರ

ಆಸ್ಪತ್ರೆ-ಹಾಸ್ಟೆಲ್‌ ಪರಿಶೀಲನೆ, ಸಂವಾದ

ಹಾವೇರಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಜಿ.ಚಂಗಪ್ಪ ಗುರುವಾರ ಜಿಲ್ಲೆಯ ವಿವಿಧ ವಿದ್ಯಾರ್ಥಿ ವಸತಿ ನಿಲಯ, ಆಸ್ಪತ್ರೆ ಮತ್ತು ಜಿಲ್ಲಾಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 17 Jan 2020, 5:00 am
ಹಾವೇರಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಜಿ.ಚಂಗಪ್ಪ ಗುರುವಾರ ಜಿಲ್ಲೆಯ ವಿವಿಧ ವಿದ್ಯಾರ್ಥಿ ವಸತಿ ನಿಲಯ, ಆಸ್ಪತ್ರೆ ಮತ್ತು ಜಿಲ್ಲಾಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web hospital hostel review dialogue
ಆಸ್ಪತ್ರೆ-ಹಾಸ್ಟೆಲ್‌ ಪರಿಶೀಲನೆ, ಸಂವಾದ


ದಾವಣಗೆರೆಯಿಂದ ರಾಣೇಬೆನ್ನೂರಿಗೆ ಮುಂಜಾನೆ ಆಗಮಿಸಿದ ಕೆ.ಜಿ.ಚಂಗಪ್ಪ ಅವರು, ಈ ನಗರದ ವಸತಿ ನಿಲಯಗಳಲ್ಲಿನ ಮೂಲ ಸೌಕರ್ಯಗಳ ಕುರಿತಂತೆ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಜತೆ ಊಟ, ವಸತಿ, ಸೌಲಭ್ಯಗಳ ಕುರಿತಂತೆ ಸಂವಾದ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿವಿದ್ಯಾರ್ಥಿಗಳು ಮೂಲ ಸೌಕರ್ಯ ಸೌಕರ್ಯಗಳಲ್ಲಿಯಾವುದೇ ಕೊರತೆ ಇಲ್ಲಎಂದು ಉತ್ತರಿಸಿದರು.

ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಚಿಕಿತ್ಸಾ ಸೌಲಭ್ಯ, ರೋಗಿಗಳಿಗೆ ಒದಗಿಸುವ ಸೌಲಭ್ಯಗಳು, ಸ್ವಚ್ಛತೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಕಿತ್ಸೆಗೆ ಬಂದ ಮತ್ತು ದಾಖಲಾಗಿರುವ ರೋಗಿಗಳಿಂದ ಚಿಕಿತ್ಸಾ ಸೌಲಭ್ಯಗಳ ಕುರಿತಂತೆ ಮಾಹಿತಿ ಪಡೆದರು.

ಹಾವೇರಿಯಲ್ಲಿಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಸತಿ ನಿಲಯಗಳಿಗೆ ಭೇಟಿ ನೀಡಿ ವಿವರವಾಗಿ ಪರಿಶೀಲನೆ ನಡೆಸಿ ವಾರ್ಡನ್‌ಗಳಿಂದ ಮಾಹಿತಿ ಸಂಗ್ರಹಿಸಿದರು.

ವಸತಿ ನಿಲಯಗಳ ಅಡುಗೆ ಕೊಣೆ, ಶೌಚಾಲಯ ಗೃಹಗಳ ಸ್ವಚ್ಛತೆ, ವಿದ್ಯಾರ್ಥಿಗಳ ಕೊಠಡಿಗಳಿಗೆ ತೆರಳಿ ಹಾಸಿಗೆ, ಹೊದಿಕೆ, ಕುಡಿಯುವ ನೀರು, ವಿದ್ಯುತ್‌ ವ್ಯವಸ್ಥೆ, ಗ್ರಂಥಾಲಯ ವ್ಯವಸ್ಥೆ, ತುರ್ತು ಸಂದರ್ಭಗಳಲ್ಲಿವೈದ್ಯಕೀಯ ಹಾಗೂ ರಕ್ಷಣಾ ನೆರವು ಕುರಿತಂತೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸೌಲಭ್ಯಗಳಲ್ಲಿಕೊರತೆ ಅಥವಾ ಯಾವುದಾದರೂ ನ್ಯೂನ್ಯತೆಗಳಿದ್ದರೆ ಮಾಹಿತಿಯನ್ನು ವಿನಿಮಯಮಾಡಿಕೊಳ್ಳುವಂತೆ ಸಲಹೆ ನೀಡಿದರು. ವಸತಿ ನಿಲಯಗಳಲ್ಲಿಕಾರ್ಯನಿರ್ವಹಿಸುತ್ತಿರುವ ಕಾಯಂ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಹೊಂದಿದ ನೌಕರರಿಂದ ಮಾಹಿತಿ ಪಡೆದ ಅವರು ಮಾಹೆಯಾನ ವೇತನ ಪಾವತಿ ಪಿ.ಎಫ್‌, ಇ.ಎಸ್‌.ಐ ಕಟಾವಣೆ ಕುರಿತಂತೆ ಮಾಹಿತಿ ಪಡೆದುಕೊಂಡರು.

ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿವೈದ್ಯಕೀಯ, ಪೊಲೀಸ್‌ ನೆರವು ಪಡೆಯಲು ಅನುಕೂಲವಾಗುವಂತೆ ಸಹಾಯವಾಣಿಗಳ ಸಂಖ್ಯೆಗಳನ್ನು ಪ್ರದರ್ಶಿಸುವಂತೆ ವಾರ್ಡ್‌ನ್‌ಗಳಿಗೆ ನಿರ್ದೇಶನ ನೀಡಿದರು. ಹಾಸಿಗೆ, ಹೊದಿಕೆಯ ಬದಲಾವಣೆ, ಸ್ವಚ್ಛತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಹಾವೇರಿ ತಹಶೀಲ್ದಾರ ಜಿ.ಎಸ್‌. ಶಂಕರ್‌ ಮತ್ತು ರಾಣೇಬೆನ್ನೂರ ತಹಶೀ ಲ್ದಾರ ಬಸವನಗೌಡ, ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೈತ್ರಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ರಾಜು ಕೂಲೇರ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗುಡ್ಡಪ್ಪ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ವಿದ್ಯಾರ್ಥಿ ನಿಲಯಗಳ ವಾರ್ಡ್‌ನ್‌ಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ