ಆ್ಯಪ್ನಗರ

ಹಿರೇಕೆರೂರಲ್ಲಿ ರೈತ ವಿರೋಧಿ ಕಾಯಿದೆ, ಬೃಹತ್‌ ಪ್ರತಿಭಟನೆ

ಹಿರೇಕೆರೂರು: ರೈತ ವಿರೋಧಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಪಟ್ಟಣದಲ್ಲಿಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 29 Sep 2020, 5:00 am
ಹಿರೇಕೆರೂರು: ರೈತ ವಿರೋಧಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಪಟ್ಟಣದಲ್ಲಿಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 28HKR 1_23
ರೈತ ವಿರೋಧಿ ಕಾಯಿದೆ ವಿರೋಧಿಸಿ ವಿವಿಧ ಸಂಘಟನೆಗಳ ವತಿಯಿಂದ ಹಿರೇಕೆರೂರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್‌, ಸರಕಾರ ಭೂಸುಧಾರಣಾ ತಿದ್ದುಪಡಿ ಕಾಯಿದೆ ರೈತರ ಹಿತಕ್ಕೆ ಧಕ್ಕೆಯಾಗಲಿದೆ. ತಕ್ಷಣ ಕಾಯಿದೆ ಹಿಂಪಡೆಯಬೇಕು. ಎಪಿಎಂಸಿ ಕಾಯಿದೆಯನ್ನು ಬಂಡವಾಳಶಾಹಿಗಳು ದುರಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದ್ದು, ಕಾಯಿದೆಯನ್ನು ಮರುಪರಿಶೀಲನೆ ಮಾಡಬೇಕು. ಅದೇ ರೀತಿ ವಿದ್ಯುತ್‌ ಖಾಸಗೀಕರಣ ಮಾಡಬಾರದು. ಎಲ್ಲತಾಲೂಕು ಕೇಂದ್ರಗಳಲ್ಲಿಗೋವಿನಜೋಳ ಮತ್ತು ಭತ್ತ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಸರ್ವಜ್ಞ ವೃತ್ತದಲ್ಲಿಕೆಲಕಾಲ ರಸ್ತೆ ತಡೆ ನಡೆಸಿ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿರೈತ ಸಂಘದ ತಾಲೂಕ ಅಧ್ಯಕ್ಷ ಪ್ರಭುಗೌಡ ಪ್ಯಾಟಿ, ಉತ್ತರ ಕರ್ನಾಟಕ ರೈತ ಸಂಘದ ಜಗದೀಶ ಕುಸಗೂರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ ಮಡಿವಾಳರ, ಕರವೇ ಅಧ್ಯಕ್ಷ ಗಿರೀಶ ಬಾರ್ಕಿ, ಕಾಂಗ್ರಸ್‌ ಯುವ ಮುಖಂಡ ದಿಗ್ವಿಜಯ ಹತ್ತಿ, ಕಾಂಗ್ರಸ್‌ ಜಿಲ್ಲಾಪ್ರಧಾನ ಕಾರ್ಯದರ್ಶಿ ದುರುಗಪ್ಪ ನೀರಲಗಿ, ಕಾಮಾಕ್ಷಿ ರೇವಣಕರ, ಮಹ್ಮದ್‌ಗೌಸ್‌ ಪಾಟೀಲ, ಶಾಂತನಗೌಡ ಪಾಟೀಲ, ಗಂಗನಗೌಡ ಮುದಿಗೌಡ್ರ, ಹನುಮಂತಪ್ಪ ಜೊಗೇರ, ಶಂಭು ಮುತ್ತಗಿ, ಯಶವಂತ ತಿಮಕಾಪುರ, ಶಂಕರಗೌಡ ಮಕ್ಕಳ್ಳಿ, ರಂಗಣ್ಣ ಮಲೇಬೆನ್ನೂರ, ನವೀನ್‌ ಹುಲ್ಲತ್ತಿ, ನಾಗರಾಜ ಮಳೂರ, ಕನ್ನಪ್ಪ ಮಾಳಕ್ಕನವರಮ ಟಿಪ್ಪುಸುಲ್ತಾನ್‌ ಮಕಾನದಾರ, ಬಿಎಚ್‌.ಬಣಕಾರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ