ತುಮ್ಮಿನಕಟ್ಟಿ: ಮನುಜನು ತನ್ನ ಜೀವಿತ ಕಾಲದಲ್ಲಿಮನಸ್ಸು, ಬುದ್ಧಿ, ಚಿತ್ತ ಎಲ್ಲಿಯವರೆಗೂ ಶುದ್ಧವಾಗಿರುವುದಿಲ್ಲವೋ ಅಲ್ಲಿಯವರೆಗೂ ಶಾಂತಿ, ನೆಮ್ಮದಿ ಹಾಗೂ ಸಂತೃಪ್ತಿ ದೊರೆಯುವುದಿಲ್ಲಎಂದು ದಾವಣಗೇರಿಯ ಜಡಿಸಿದ್ದೇಶ್ವರ ಮಠದ ಶಿವಾನಂದ ಸ್ವಾಮಿಜಿ ಹೇಳಿದರು.
ಮಂಗಳವಾರ ರಾಣೇಬೆನ್ನೂರು ತಾಲೂಕಿನ ಸುಕ್ಷೇತ್ರ ಬೆನಕನಕೊಂಡದ ಸಿದ್ಧಾಶ್ರಮದಲ್ಲಿ ಸದ್ಗುರು ಮಹದೇವಾನಂದ ಸ್ವಾಮಿಯವರ 95ನೇ ಜಯಂತ್ಯುತ್ಸವ ಹಾಗೂ ವೇದಾಂತ ಪರಿಷತ್ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮನುಷ್ಯ ಮನಸ್ಸು, ಬುದ್ಧಿ, ಚಿತ್ತಗಳನ್ನು ತನ್ನ ಹಿಡಿತದಲ್ಲಿಇಟ್ಟುಕೊಂಡು ಸದ್ಗುರುವಿನ ಉಪದೇಶವನ್ನು ಆಲಿಸಿದಾಗಲೇ ಮನುಜ ಸದ್ಗತಿಯನ್ನು ಪಡೆಯಲು ಸಾಧ್ಯ. ಸತ್ಸಂಗವು ಮನುಷ್ಯನನ್ನು ಒತ್ತಡದ ಜೀವನದಿಂದ ಬಿಡುಗಡೆ ಪಡೆದು ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗವಾಗಿದೆ ಎಂದು ಶ್ರೀಗಳು ತಿಳಿಸಿದರು.
ಶ್ರೀ ಮಠದ ಪೀಠಾಧಿಪತಿ ಮಹದೇವಾನಂದ ಸ್ವಾಮೀಜಿ ಮಾತನಾಡಿ, ಶಿವಾವತಾರಿ ಭೂಲೋಕವಾಸಿಯಾದ ಸಿದ್ಧಾರೂಢರು ಸರ್ವ ಜೀವಿಗಳಿಗೂ ಸುಖ, ಶಾಂತಿ, ನೆಮ್ಮದಿ, ಮುಕ್ತಿ ಪಡೆಯಲೆಂಬ ಸಂಕಲ್ಪದಿಂದ ಜಾತಿ, ಮತ, ಪಂಥಗಳ ಬೇಧವಿಲ್ಲದೆ ಶಾಂತಿ ಮಂತ್ರವನ್ನು ಬೋಧಿಸಿದ ಮಹಾತ್ಮರು. ಅಂತವರು ಹಾಕಿಕೊಟ್ಟ ಮಾರ್ಗದಲ್ಲಿನಡೆದಾಗ ಜಾತಿಯ ಸೋಂಕು ತಗುಲದೆ ಸರ್ವರೂ ಒಂದಾಗಿ ಬಾಳಲು ಸಾಧ್ಯ. ಅಲ್ಲದೆ ಸತ್ಸಂಗವು ಜನ್ಮಜನ್ಮಾಂತರ ಪಾಪಕರ್ಮಗಳು ನಾಶವಾಗಿ ಮುಕ್ತಿಯನ್ನು ಪಡೆಯಲು ಸಾಧ್ಯ ಎಂದು ಶ್ರೀಗಳು ನುಡಿದರು.
ಮಣಕೂರ ಸಿದ್ಧಾರೂಢ ಮಠದ ಬಸಮ್ಮತಾಯಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಲ್ಲಿಮನೆ ಮಾಡಿಕೊಂಡಿರುವ ದುಷ್ಟ ಗುಣಗಳನ್ನು ಸಂಹರಿಸಿ ಸುಗುಣವಂತರನ್ನಾಗಿಸುವ ಮಾರ್ಗವೇ ಸತ್ಸಂಗ, ಹೋಗುತಿಹುದು ಕಾಯ ವ್ಯರ್ಥ ಅದರ ಲಾಭ ತಿಳಿದವ ಯೋಗಿ ಸಮರ್ಥ. ಭಕ್ತಿ, ಜ್ಞಾನ, ವೈರಾಗ್ಯ ಮೋಕ್ಷ ಸಂಪಾದನೆಯ ಮಾರ್ಗಗಳಾದರೆ, ದೀನ, ದಲಿತರ, ಅನಾಥರ ಕಲ್ಯಾಣಕ್ಕಾಗಿ ಸಲ್ಲಿಸುವ ನಿಸ್ವಾರ್ಥ ಸೇವೆಯೇ ಧರ್ಮ ಕಾರ್ಯವಾಗಿದೆ ಎಂದು ನುಡಿದರು.
ಹಲವಾರು ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯ ಜನ್ಮ ಪ್ರಾಪ್ತಿಯಾಗಿದೆ. ಪರೋಪಕಾರಂ ಇದಂ ಶರೀರಂ ಎಂಬಂತೆ ಪ್ರತಿಯೊಬ್ಬ ಮನುಷ್ಯನು ತನ್ನ ಜೀವಿತದ ಅವಧಿಯಲ್ಲಿಪುಣ್ಯದ ಕಾರ್ಯಗಳನ್ನು ಮಾಡುವುದರೊಂದಿಗೆ ಭಗವಂತನ ಕೃಪೆಗೆ ಪಾತ್ರರಾಗಬೇಕು, ಗುರುವಿನ ಸೇವೆ ಹಾಗೂ ಪುಣ್ಯ ಕಾರ್ಯ ಮಾಡಲು ಏಕಾಗ್ರತೆಗೆ ಸತ್ಸಂಗ ಉತ್ತಮ ಮಾರ್ಗವಾಗಿದೆ ಎಂದು ತಿಳಿಸಿದರು.
ಯೋಗಾನಂದ ಸ್ವಾಮೀಜಿ, ಹನುಮಾರೂಢ ಶ್ರೀಗಳು, ಅನ್ನಪೂರ್ಣಮ್ಮತಾಯಿ, ಚನ್ನಬಸವಾನಂದ ಶ್ರೀಗಳು ಆಶೀರ್ವಚನ ನೀಡಿದರು. ಗ್ರಾಪಂ ಅಧ್ಯಕ್ಷ ಚನ್ನಬಸಪ್ಪ ಬಿದರಿ, ಎಚ್.ಎಚ್. ಗೋವಿಂದಗೌಡ್ರ, ಭೀಮರಡ್ಡಿ ಹಾದಿಮನಿ, ಭೀಮಪ್ಪ ಯರೆಕೊಪ್ಪಿ, ಜಗದೀಶ ಆನ್ವೇರಿ ಸೇರಿದಂತೆ ಮತ್ತಿತರರು ಇದ್ದರು.
ಮಂಗಳವಾರ ರಾಣೇಬೆನ್ನೂರು ತಾಲೂಕಿನ ಸುಕ್ಷೇತ್ರ ಬೆನಕನಕೊಂಡದ ಸಿದ್ಧಾಶ್ರಮದಲ್ಲಿ ಸದ್ಗುರು ಮಹದೇವಾನಂದ ಸ್ವಾಮಿಯವರ 95ನೇ ಜಯಂತ್ಯುತ್ಸವ ಹಾಗೂ ವೇದಾಂತ ಪರಿಷತ್ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮನುಷ್ಯ ಮನಸ್ಸು, ಬುದ್ಧಿ, ಚಿತ್ತಗಳನ್ನು ತನ್ನ ಹಿಡಿತದಲ್ಲಿಇಟ್ಟುಕೊಂಡು ಸದ್ಗುರುವಿನ ಉಪದೇಶವನ್ನು ಆಲಿಸಿದಾಗಲೇ ಮನುಜ ಸದ್ಗತಿಯನ್ನು ಪಡೆಯಲು ಸಾಧ್ಯ. ಸತ್ಸಂಗವು ಮನುಷ್ಯನನ್ನು ಒತ್ತಡದ ಜೀವನದಿಂದ ಬಿಡುಗಡೆ ಪಡೆದು ಮುಕ್ತಿಯ ಕಡೆಗೆ ಕೊಂಡೊಯ್ಯುವ ಸನ್ಮಾರ್ಗವಾಗಿದೆ ಎಂದು ಶ್ರೀಗಳು ತಿಳಿಸಿದರು.
ಶ್ರೀ ಮಠದ ಪೀಠಾಧಿಪತಿ ಮಹದೇವಾನಂದ ಸ್ವಾಮೀಜಿ ಮಾತನಾಡಿ, ಶಿವಾವತಾರಿ ಭೂಲೋಕವಾಸಿಯಾದ ಸಿದ್ಧಾರೂಢರು ಸರ್ವ ಜೀವಿಗಳಿಗೂ ಸುಖ, ಶಾಂತಿ, ನೆಮ್ಮದಿ, ಮುಕ್ತಿ ಪಡೆಯಲೆಂಬ ಸಂಕಲ್ಪದಿಂದ ಜಾತಿ, ಮತ, ಪಂಥಗಳ ಬೇಧವಿಲ್ಲದೆ ಶಾಂತಿ ಮಂತ್ರವನ್ನು ಬೋಧಿಸಿದ ಮಹಾತ್ಮರು. ಅಂತವರು ಹಾಕಿಕೊಟ್ಟ ಮಾರ್ಗದಲ್ಲಿನಡೆದಾಗ ಜಾತಿಯ ಸೋಂಕು ತಗುಲದೆ ಸರ್ವರೂ ಒಂದಾಗಿ ಬಾಳಲು ಸಾಧ್ಯ. ಅಲ್ಲದೆ ಸತ್ಸಂಗವು ಜನ್ಮಜನ್ಮಾಂತರ ಪಾಪಕರ್ಮಗಳು ನಾಶವಾಗಿ ಮುಕ್ತಿಯನ್ನು ಪಡೆಯಲು ಸಾಧ್ಯ ಎಂದು ಶ್ರೀಗಳು ನುಡಿದರು.
ಮಣಕೂರ ಸಿದ್ಧಾರೂಢ ಮಠದ ಬಸಮ್ಮತಾಯಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನಲ್ಲಿಮನೆ ಮಾಡಿಕೊಂಡಿರುವ ದುಷ್ಟ ಗುಣಗಳನ್ನು ಸಂಹರಿಸಿ ಸುಗುಣವಂತರನ್ನಾಗಿಸುವ ಮಾರ್ಗವೇ ಸತ್ಸಂಗ, ಹೋಗುತಿಹುದು ಕಾಯ ವ್ಯರ್ಥ ಅದರ ಲಾಭ ತಿಳಿದವ ಯೋಗಿ ಸಮರ್ಥ. ಭಕ್ತಿ, ಜ್ಞಾನ, ವೈರಾಗ್ಯ ಮೋಕ್ಷ ಸಂಪಾದನೆಯ ಮಾರ್ಗಗಳಾದರೆ, ದೀನ, ದಲಿತರ, ಅನಾಥರ ಕಲ್ಯಾಣಕ್ಕಾಗಿ ಸಲ್ಲಿಸುವ ನಿಸ್ವಾರ್ಥ ಸೇವೆಯೇ ಧರ್ಮ ಕಾರ್ಯವಾಗಿದೆ ಎಂದು ನುಡಿದರು.
ಹಲವಾರು ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯ ಜನ್ಮ ಪ್ರಾಪ್ತಿಯಾಗಿದೆ. ಪರೋಪಕಾರಂ ಇದಂ ಶರೀರಂ ಎಂಬಂತೆ ಪ್ರತಿಯೊಬ್ಬ ಮನುಷ್ಯನು ತನ್ನ ಜೀವಿತದ ಅವಧಿಯಲ್ಲಿಪುಣ್ಯದ ಕಾರ್ಯಗಳನ್ನು ಮಾಡುವುದರೊಂದಿಗೆ ಭಗವಂತನ ಕೃಪೆಗೆ ಪಾತ್ರರಾಗಬೇಕು, ಗುರುವಿನ ಸೇವೆ ಹಾಗೂ ಪುಣ್ಯ ಕಾರ್ಯ ಮಾಡಲು ಏಕಾಗ್ರತೆಗೆ ಸತ್ಸಂಗ ಉತ್ತಮ ಮಾರ್ಗವಾಗಿದೆ ಎಂದು ತಿಳಿಸಿದರು.
ಯೋಗಾನಂದ ಸ್ವಾಮೀಜಿ, ಹನುಮಾರೂಢ ಶ್ರೀಗಳು, ಅನ್ನಪೂರ್ಣಮ್ಮತಾಯಿ, ಚನ್ನಬಸವಾನಂದ ಶ್ರೀಗಳು ಆಶೀರ್ವಚನ ನೀಡಿದರು. ಗ್ರಾಪಂ ಅಧ್ಯಕ್ಷ ಚನ್ನಬಸಪ್ಪ ಬಿದರಿ, ಎಚ್.ಎಚ್. ಗೋವಿಂದಗೌಡ್ರ, ಭೀಮರಡ್ಡಿ ಹಾದಿಮನಿ, ಭೀಮಪ್ಪ ಯರೆಕೊಪ್ಪಿ, ಜಗದೀಶ ಆನ್ವೇರಿ ಸೇರಿದಂತೆ ಮತ್ತಿತರರು ಇದ್ದರು.