ಆ್ಯಪ್ನಗರ

ತಾಲೂಕು ಮಟ್ಟದ ಶೈಕ್ಷ ಣಿಕ ಸಮ್ಮೇಳನ ಉದ್ಘಾಟನೆ

ರಾಣೇಬೆನ್ನೂರ: ಖಾಸಗಿ ಶಿಕ್ಷ ಣ ಸಂಸ್ಥೆಗಳಿಂದಾಗಿ ಇಡೀ ಶಿಕ್ಷ ಣ ವ್ಯವಸ್ಥೆ ವ್ಯಾಪಾರೀಕರಣಗೊಂಡಿದೆ ಎಂದು ಎಸ್‌ಎಫ್‌ಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಹೇಳಿದರು.

Vijaya Karnataka 12 Mar 2019, 5:00 am
ರಾಣೇಬೆನ್ನೂರ: ಖಾಸಗಿ ಶಿಕ್ಷ ಣ ಸಂಸ್ಥೆಗಳಿಂದಾಗಿ ಇಡೀ ಶಿಕ್ಷ ಣ ವ್ಯವಸ್ಥೆ ವ್ಯಾಪಾರೀಕರಣಗೊಂಡಿದೆ ಎಂದು ಎಸ್‌ಎಫ್‌ಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಹೇಳಿದರು.
Vijaya Karnataka Web HVR-11 RNR 03


ನಗರದ ಶಿಕ್ಷ ಕರ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಸೋಮವಾರ ಸ್ಥಳೀಯ ಎಸ್‌ಎಫ್‌ಐ ಸಂಘಟನೆ ವತಿಯಿಂದ ಸರಕಾರಿ ಶಾಲಾ-ಕಾಲೇಜುಗಳಿಗೆ, ಹಾಸ್ಟೆಲ್‌ಗಳಿಗೆ ಮೂಲಸೌಲಭ್ಯ ಕಲ್ಪಿಸುವುದು ಹಾಗೂ ತಾಲೂಕಿನ ಸಮಗ್ರ ಶೈಕ್ಷ ಣಿಕ ಪ್ರಗತಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಶೈಕ್ಷ ಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳು ಹಾಗೂ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾದ ಮೂಲಸೌಲಭ್ಯಗಳು ಇಲ್ಲವಾಗಿವೆ. ರಾಜ್ಯದಲ್ಲಿ ಸುಮಾರು 12 ಸಾವಿರ ಶಾಲೆಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. 10 ಸಾವಿರದಷ್ಟು ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಶಿಕ್ಷ ಣ ಎಂಬುದು ಬಡಮಕ್ಕಳ ಪಾಲಿಗೆ ಕಬ್ಬಿಣದ ಕಡಲೆಯಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷ ಣ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ನೀತಿ ಹೋಗಲಾಡಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಬೇಕು ಎಂದರು.

ತಾಲೂಕು ಕಾರ್ಯದರ್ಶಿ ಬಸವರಾಜ ಭೋವಿ ಅಧ್ಯಕ್ಷ ತೆ ವಹಿಸಿದ್ದರು. ವೀರನಗೌಡ ಪಾಟೀಲ, ಲಕ್ಷ ್ಮಣ ಎಂ.ಕೆ., ಅಕ್ಷ ತಾ ಕೆ.ಸಿ., ಪಾರ್ವತಿ ಪಾಟೀಲ, ಮಾಲತೇಶ ದೊಡ್ಡಮನಿ ಮತ್ತು ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ