ಆ್ಯಪ್ನಗರ

ವಾಹನಗಳನ್ನು ತಪಾಸಣೆ ಮಾಡಿಸಿ

ಹಾವೇರಿ: ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿಕಾಲಕಾಲಕ್ಕೆ ತಪಾಸಣೆ ಮಾಡಿಸಿ, ಪ್ರಮಾಣಪತ್ರ ಪಡೆದುಕೊಳ್ಳಬೇಕು ಹಾಗೂ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕೆಂದು ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಎಸ್‌. ಹಿರೇಮಠ ಹೇಳಿದರು.

Vijaya Karnataka 19 Nov 2019, 5:00 am
ಹಾವೇರಿ: ವಾಹನಗಳ ಮಾಲೀಕರು ತಮ್ಮ ವಾಹನಗಳನ್ನು ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿಕಾಲಕಾಲಕ್ಕೆ ತಪಾಸಣೆ ಮಾಡಿಸಿ, ಪ್ರಮಾಣಪತ್ರ ಪಡೆದುಕೊಳ್ಳಬೇಕು ಹಾಗೂ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕೆಂದು ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಎಸ್‌. ಹಿರೇಮಠ ಹೇಳಿದರು.
Vijaya Karnataka Web inspect vehicles
ವಾಹನಗಳನ್ನು ತಪಾಸಣೆ ಮಾಡಿಸಿ


ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿಆಯೋಜಿಸಲಾಗಿದ್ದ ವಾಹನ ಚಾಲಕರು ಹಾಗೂ ವಾಹನ ಮಾಲೀಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿಭಾಗವಹಿಸಿ ಮಾತನಾಡಿದರು. ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಎಲ್ಲರೂ ಪರಿಸರ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಹೆಚ್ಚು ಗಿಡಮರ ಬೆಳೆಸುವ ಮೂಲಕ ವಾಯುಮಾಲಿನ್ಯ ತಡೆಯಲು ಪ್ರಯತ್ನಿಸಬೇಕಿದೆ. ಇಂಥÜ ತಿಳುವಳಿಕೆ ಕಾರ್ಯಕ್ರಮಗಳ ಆಯೋಜನೆ ಮೂಲಕ ವಾಯುಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿತಗ್ಗಿಸಬಹುದಾಗಿದೆ ಎಂದು ಹೇಳಿದರು. ಕಚೇರಿಯ ಅಧೀಕ್ಷಕ ರಮೇಶ ದೊಡ್ಡಮನಿ, ಸತೀಶ ವೈ.ಆರ್‌. ಹಾಗೂ ಸಿಬ್ಬಂದಿ ಶ್ರೀಪಾದ್‌ ಬ್ಯಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ