ಆ್ಯಪ್ನಗರ

ಕರ್ನಾಟಕ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸೂಚನೆ

ಹಾವೇರಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿಜಿಲ್ಲಾಡಳಿತದಿಂದ ನವೆಂಬರ್‌ 1 ರಂದು ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಪೂರ್ವ ಸಿದ್ಧತೆ ಕೆೃಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 16 Oct 2019, 5:00 am
ಹಾವೇರಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿಜಿಲ್ಲಾಡಳಿತದಿಂದ ನವೆಂಬರ್‌ 1 ರಂದು ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಪೂರ್ವ ಸಿದ್ಧತೆ ಕೆೃಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web karnataka rajyotsava is a note of meaningful celebration
ಕರ್ನಾಟಕ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸೂಚನೆ


ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿನಾಡು-ನುಡಿ ಮತ್ತು ಅಭಿವೃದ್ಧಿ ಕುರಿತಂತೆ ಸ್ಥಬ್ಧಚಿತ್ರಗಳ ಪ್ರದರ್ಶನ, ಸಾಂಸ್ಕೃತಿಕ ಮೆರವಣಿಗೆ, ನಾಡು-ನುಡಿಯ ಬಿಂಬಿಸುವ ನೃತ್ಯ ಪ್ರದರ್ಶನ, ಸಾಧಕರಿಗೆ ಸನ್ಮಾನ ಸೇರಿದಂತೆ ವೆೃವಿಧ್ಯಮ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

ನವೆಂಬರ್‌ 1 ರಂದು ಬೆಳಗ್ಗೆ 7-45 ಗಂಟೆಗೆ ಹುತಾತ್ಮ ಮೆೃಲಾರ ಮಹದೇವ ವೃತ್ತದಿಂದ ಹೊಸಮನಿ ಸಿದ್ದಪ್ಪ ಜಿಲ್ಲಾಕ್ರೀಡಾಂಗಣದವರೆಗೆ ಜಾನಪದ ತಂಡದೊಂದಿಗೆ ಹಾಗೂ ವಿವಿಧ ಶಾಲಾ ಮಕ್ಕಳ ಭಾಗವವಿಸುವಿಕೆಯೊಂದಿಗೆ ಕನ್ನಡ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಸಲು ತೀರ್ಮಾನಿಸಿದರು.

ಜಿಲ್ಲಾಕ್ರೀಡಾಂಗಣದಲ್ಲಿಸಮಾರಂಭಕ್ಕೆ ಅಗತ್ಯವಾದ ಆಸನ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ, ಧ್ವಜಾರೋಹಣ ವ್ಯವಸ್ಥೆ, ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ನಾಡು-ನುಡಿ ಬಿಂಬಿಸುವ ಸಾಮೂಹಿಕ ನೃತ್ಯ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಿದರು.

ಕನ್ನಡ ನಾಡು, ನುಡಿ ಹಾಗೂ ನಾಡಿನ ಅಭಿವೃದ್ಧಿಗೆ ವಿವಿಧ ಕ್ಷೇತ್ರದಲ್ಲಿಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ನಿರ್ಧರಿಸಿದರು.

ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಾಯುವ್ಯ ಕರ್ನಾಟಕ ಸಾರಿಗೆ, ತೋಟಗಾರಿಕೆ, ಕೆೃಮಗ್ಗ ಮತ್ತು ಜವಳಿ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಪ್ರಗತಿ ಬಿಂಬಿಸುವ ಸ್ಥಬ್ಧಚಿತ್ರಗಳನ್ನು ಕ್ರೀಡಾಂಗಣದಲ್ಲಿಪ್ರದರ್ಶಿಸಲು ಅಗತ್ಯ ಸಿದ್ಧತೆ ಕೆೃಗೊಳ್ಳುವಂತೆ ಸೂಚನೆ ನೀಡಿದರು.

ರಾಜ್ಯೋತ್ಸವ ಅಂಗವಾಗಿ ನವೆಂಬರ್‌ 1ರ ಸಂಜೆ ನಗರದ ಗುರುಭವನದಲ್ಲಿವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಸನ್ಮಾನ, ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆ, ಮೆರವಣಿಗೆ, ವೇದಿಕೆ ಅಲಂಕಾರ ಸ್ಥಬ್ದಚಿತ್ರಗಳ ನಿರ್ವಹಣೆ ಸೇರಿದಂತೆ ಕಾರ್ಯಕ್ರಮದಲ್ಲಿಯಾವುದೇ ಲೋಪವಾಗದಂತೆ ಎಲ್ಲವನ್ನು ಮುಂಜಾಗ್ರತವಾಗಿ ಸಿದ್ಧತೆಕೆೃಗೊಳ್ಳಲು ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳನ್ನು ಒಳಗೊಂಡ 12 ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ಅವರು ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿಡಿಡಿಪಿಐ ಅಂದಾನೆಪ್ಪ ವಡಗೇರಿ, ಡಿಡಿಪಿಯು ಪೀರಜಾದೆ, ವಾರ್ತಾಧಿಕಾರಿ ಬಿ.ಆರ್‌.ರಂಗನಾಥ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ನಗರಸಭೆ ಪೌರಾಯುಕ್ತ ಬಸವರಾಜ ಜಿದ್ದಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ