ಆ್ಯಪ್ನಗರ

ಕೋಳಿವಾಡ ಹೇಳಿಕೆ ಸರಿಯಲ್ಲ: ಪೂಜಾರ

ರಾಣೇಬೆನ್ನೂರ : ಚುನಾವಣೆ ಸೋಲಿನಿಂದ ಹತಾಶರಾಗಿರುವ ಮಾಜಿ ಶಾಸಕ ಕೆ.ಬಿ.ಕೋಳಿವಾಡ ಅವರು ಮಾಧ್ಯಮದ ಎದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಮರಡೆಪ್ಪ ಪೂಜಾರ ಹೇಳಿದರು.

Vijaya Karnataka 19 May 2018, 5:00 am
ರಾಣೇಬೆನ್ನೂರ : ಚುನಾವಣೆ ಸೋಲಿನಿಂದ ಹತಾಶರಾಗಿರುವ ಮಾಜಿ ಶಾಸಕ ಕೆ.ಬಿ.ಕೋಳಿವಾಡ ಅವರು ಮಾಧ್ಯಮದ ಎದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಮರಡೆಪ್ಪ ಪೂಜಾರ ಹೇಳಿದರು.
Vijaya Karnataka Web koliwad statement is not correct poojara
ಕೋಳಿವಾಡ ಹೇಳಿಕೆ ಸರಿಯಲ್ಲ: ಪೂಜಾರ


ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಐದು ವರ್ಷ ಆಡಳಿತ ನಡೆಸಿದ್ದರೂ, ಜನರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಕೋಳಿವಾಡರು ವಿಫಲರಾಗಿದ್ದಾರೆ. ಅದರ ಪರಿಣಾಮವಾಗಿಯೇ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಆದರೆ ಸತ್ಯ ಸಂಗತಿಯನ್ನು ಅರಿಯದೇ ಸಿದ್ದರಾಮಯ್ಯ ತಮ್ಮ ಪರವಾಗಿ ಪ್ರಚಾರ ಮಾಡಲಿಲ್ಲ. ಹಾಗೂ ತಮ್ಮ ಸೋಲಿಗೆ ಅವರೇ ಕಾರಣ ಎಂದು ಮಿಥ್ಯಾರೋಪ ಮಾಡಿರುವುದು ಖೇದಕರ ಸಂಗತಿಯಾಗಿದೆ.

ರಾಣೇಬೆನ್ನೂರಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ ನೀಡುವುದನ್ನು ಬಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡುವುದು ಸರಿಯಲ್ಲ. ಕಳೆದ (2014) ಲೋಕಸಭಾ ಚುನಾವಣೆ ಸಮಯದಲ್ಲಿ ನೀವು ಬಿಜೆಪಿ ಪರ ಕೆಲಸ ಮಾಡಿದ್ದಿರೋ ಅಥವಾ ಕಾಂಗ್ರೆಸ್‌ ಪರವಾಗಿ ಕೆಲಸ ಮಾಡಿರುವಿರೋ ಆತ್ಮಾವಲೋಕನ ಮಾಡಿಕೊಳ್ಳಿರಿ. ಈ ಹಿಂದೆ ರಡ್ಡಿ ಕಾಂಗ್ರೆಸ್‌ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ನೀವು ಇದೇ ಪ್ರವೃತ್ತಿಯನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ನಿಮ್ಮ ವಿರುದ್ಧ ಸಮಾಜದ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ