ಆ್ಯಪ್ನಗರ

ಯುವಜನತೆ ದೈಹಿಕ, ಮಾನಸಿಕ ಸದೃಢರಾಗಲಿ

ಹಾವೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಸ್ಪರ್ಧಾತ್ಮಕವಾಗಿ ಎದುರಿಸಲು ಯುವ ಸಮೂಹ ಮಾನಸಿಕ ಮತ್ತು ದೈಹಿಕವಾಗಿ ಸಿದ್ಧರಾಗಿರಬೇಕು ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ಹೇಳಿದರು.

Vijaya Karnataka 26 Sep 2019, 5:00 am
ಹಾವೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಸ್ಪರ್ಧಾತ್ಮಕವಾಗಿ ಎದುರಿಸಲು ಯುವ ಸಮೂಹ ಮಾನಸಿಕ ಮತ್ತು ದೈಹಿಕವಾಗಿ ಸಿದ್ಧರಾಗಿರಬೇಕು ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ಹೇಳಿದರು.
Vijaya Karnataka Web let the young people be physical and mental
ಯುವಜನತೆ ದೈಹಿಕ, ಮಾನಸಿಕ ಸದೃಢರಾಗಲಿ


ನಗರದ ಕೆ.ಎಲ್‌.ಇ. ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಏಡ್ಸ್‌ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾಯ ಎಲ್ಲಾಪದವಿ ಮತ್ತು ವೃತ್ತಿಪರ ಕಾಲೇಜುಗಳ ಎನ್‌.ಎಸ್‌.ಎಸ್‌. ಮತ್ತು ರೆಡ್‌ ರಿಬ್ಬನ್‌ ಕ್ಲಬ್‌ಗಳು, ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಹಾವೇರಿ ಸಹಯೋಗದಲ್ಲಿಬುಧವಾರ ನಡೆದ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನ ಹಾಗೂ ರಕ್ತದಾನ ಶಿಬಿರ ಮತ್ತು ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಸಮೂಹ ಮಾನಸಿಕವಾಗಿ ಸಿದ್ಧರಾಗುವುದರ ಜೊತೆಗೆ ಸೂಕ್ತ ಮಾರ್ಗದರ್ಶನ ಮತ್ತು ಕಠಿಣ ಪರಿಶ್ರಮ ಪಟ್ಟರೆ ಸ್ಪರ್ಧಾತ್ಮಕವಾಗಿ ಎದುರಿಸಲು ಸಾಧ್ಯ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಲಿಷ್ಠರಾಗಿರಬೇಕು. ಪ್ರಸ್ತುತ ದಿನಮಾನಗಳಲ್ಲಿಯುವಜನತೆಗೆ ಆರೋಗ್ಯದ ಬಗ್ಗೆ ಮಾರ್ಗದರ್ಶನ ಅವಶ್ಯಕತೆಯಿದೆ. ಯುವಕರು ಈ ದೇಶದ ಬೆನ್ನೆಲುಬು ಆಗಿದ್ದಾರೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯ ರಕ್ತಭಂಡಾರದ ವೈದ್ಯಾಧಿಕಾರಿ ಡಾ.ಬಸವರಾಜ್‌ ತಳವಾರ ಮಾತನಾಡಿ, ರಕ್ತದಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮಗಳಾಗುವುದಿಲ್ಲ. ಬದಲಾಗಿ ನಮ್ಮಲ್ಲಿರುವ ಅನೇಕ ರೋಗಗಳ ಮುಕ್ತಿಗೆ ಸಹಾಯಕಾರಿಯಾಗಲಿದೆ ಎಂದರು.

ಪ್ರಸ್ತುತದಲ್ಲಿ್ಲಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಲ್ಲಿಶೇ.20ರಷ್ಟು ಜನರಿಗೆ ರಕ್ತದಾನದ ಅವಶ್ಯರುತ್ತದೆ. ಆದರೆ ರಕ್ತದಾನ ಮಾಡುವವರ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟು ಮಾತ್ರ. ಹೀಗಾಗಿ ಯುವಕ/ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆಯ ಅಂಗವಾಗಿ ಭಿತ್ತಿಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ಜಂತು ಹುಳು ಮಾತ್ರಗಳನ್ನು ವಿತರಿಸಿದರು.

ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನ ಹಾಗೂ ರಕ್ತದಾನ ಶಿಬಿರ ಅಂಗವಾಗಿ ಆಯೋಜಿಸಿದ್ದ ಭಿತ್ತಿ ಚಿತ್ರಸ್ಪರ್ಧೇಯಲ್ಲಿವಿಜೇತರಾದ ಹಾನಗಲ್ಲಿನ ಎಸ್‌.ಕೆ.ಸಿ.ಇ. ಕಾಲೇಜಿನ ವಿದ್ಯಾರ್ಥಿನಿ ಮಮತಾ.ಯು. (ಪ್ರಥಮ), ಲಾವಣ್ಯ ಎಸ್‌.ಡಿ. (ದ್ವೀತಿಯ), ಹಾವೇರಿಯ ಟಿ.ಎಮ್‌.ಎ.ಇ.ಎಸ್‌. ಬಿ.ಪಿ.ಎಡ್‌.ಕಾಲೇಜಿನ ವಿದ್ಯಾರ್ಥಿ ಮಹ್ಮದ್‌ಅಲಿ ಸಂಕ್ಲಿಪುರ (ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿರಕ್ತದಾನ ಮಾಡಿದರು.

ಜಿಲ್ಲೆಯಲ್ಲಿಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಹಾವೇರಿಯ ವಿಜಯ ದೇವರಗುಂಡಿಮಠ, ಗುರು ಎಂ ಕೆಂಣ್ಣನವರ ಹಾಗೂ ದೇವಗಿರಿಯ ಗೀರಿಶ ವೈ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಕ್ಷಯರೋಗ ಹಾಗೂ ಎಡ್ಸ್‌ ನಿಯಂತ್ರಣಾಧಿಕಾರಿ ಡಾ.ನೀಲೇಶ್‌.ಎಂ.ಎನ್‌., ಕಾಲೇಜಿನ ಪ್ರಾಚಾರ್ಯ ಬಿ.ಚನ್ನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿಜಿಲ್ಲಾಆರ್‌.ಸಿ.ಎಚ್‌. ಅಧಿಕಾರಿ ಡಾ.ಜಯಾನಂದ, ಉಪನ್ಯಾಸಕ ದಿವಾಕರ ಕಮ್ಮಾರ, ಸುಧಾಕರ, ಸುಣಗಾರ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ