ಆ್ಯಪ್ನಗರ

ಸಮಾನತೆಯ ಸಮಾಜಕ್ಕೆ ಬದ್ಧರಾಗೋಣ

ಹಾವೇರಿ: ಸಂವಿಧಾನ ಜಾರಿಗೆ ಬಂದ ಈ ದಿನದಂದು ನಾವೆಲ್ಲಸಂವಿಧಾನದ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಬದ್ಧರಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದರು.

Vijaya Karnataka 27 Jan 2020, 5:00 am
ಹಾವೇರಿ: ಸಂವಿಧಾನ ಜಾರಿಗೆ ಬಂದ ಈ ದಿನದಂದು ನಾವೆಲ್ಲಸಂವಿಧಾನದ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಬದ್ಧರಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದರು.
Vijaya Karnataka Web 26 HAVERI 2_23
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾಕ್ರೀಡಾಂಗಣದಲ್ಲಿ71ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಾತನಾಡಿದರು.


ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾಕ್ರೀಡಾಂಗಣದಲ್ಲಿ71ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಗಣತಂತ್ರದ ಅತಿದೊಡ್ಡ ಹಬ್ಬವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿಅಸಮಾನತೆ ರಹಿತ ಸಮಾಜ ನಿರ್ಮಾಣಕ್ಕೆ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ತನ್ನ ಹೊಣೆಗಾರಿಕೆ ಮತ್ತು ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿದೆಯೇ ಎಂಬ ಬಗ್ಗೆ ಅವಲೋಕಿಸಿ ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲೆಯ ನೆರೆ ಹಾವಳಿ:
ಜಿಲ್ಲೆಯಲ್ಲಿನೆರೆ ಹಾವಳಿಯಿಂದ 22,899 ಮನೆಗಳು ಹಾನಿಯಾಗಿದ್ದು, ಎ ಮತ್ತು ಬಿ ವರ್ಗದ ಮನೆಗಳಿಗೆ ತಲಾ 1 ಲಕ್ಷ ರೂ.ನಂತೆ ಮೊದಲ ಕಂತಾಗಿ ಪರಿಹಾರ ನೀಡಲಾಗಿದೆ. ಸಿ ವರ್ಗದ 14,291 ಮನೆಗಳಿಗೆ ತಲಾ 50 ಸಾವಿರ ರೂ. ನಂತೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಲಾಗಿದೆ. ಹಾನಿಗೊಳಗಾದ ಎ ಮತ್ತು ಬಿ ವರ್ಗದ ಮನೆಗಳ ಪುನರ್‌ ನಿರ್ಮಾಣಕ್ಕೆ 5 ಲಕ್ಷ ರೂ.ಗಳನ್ನು ನಾಲ್ಕು ಕಂತುಗಳಲ್ಲಿ, ಭಾಗಶಃ ಹಾನಿಗೊಳಗಾದ ಬಿ ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವದೇ ದುರಸ್ತಿ ಮಾಡಿಕೊಳ್ಳುವದಾದಲ್ಲಿ3 ಲಕ್ಷ ರೂ. ಪರಿಹಾರವನ್ನು ಎರಡು ಕಂತುಗಳಲ್ಲಿಪಾವತಿಸಲು ಸರಕಾರ ಆದೇಶಿಸಿದೆ ಎಂದು ಹೇಳಿದರು.

ರಸ್ತೆ ದುರಸ್ಥಿ ಆರಂಭ:
ಅತಿವೃಷ್ಟಿಯಿಂದ ಹಾನಿಗಿರುವ ರಸ್ತೆಗಳ ದುರಸ್ತಿಗಾಗಿ 272 ಕಾಮಗಾರಿಗಳಿಗೆ ಅಂದಾಜು 482.16 ಲಕ್ಷ ರೂ. ಸಿಡಿ-ಕೆರೆ ಕಾಲುವೆ 54 ಕಾಮಗಾರಿಗಳಿಗೆ 65.62 ಲಕ್ಷ ರೂ., 1458 ಶಾಲಾ ಕೊಠಡಿಗಳ ದುರಸ್ತಿಗೆ 1809.52 ಲಕ್ಷ ರೂ., 275 ಅಂಗನವಾಡಿ ಕಟ್ಟಡಗಳ ದುರಸ್ತಿಗೆ 276.68 ಲಕ್ಷ ರೂ. ಹಾಗೂ 115 ಕುಡಿಯುವ ನೀರಿನ ಟ್ಯಾಂಕರ್‌ಗಳ ಸ್ವಚ್ಛತೆಗಾಗಿ 37.7 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

2018-19ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬೀಮಾ ಯೋಜನೆಯಡಿ ಜಿಲ್ಲೆಯ 75,347 ರೈತರಿಗೆ 160.50 ಕೋಟಿ ರೂ. ಬೆಳೆ ವಿಮೆ ಮಂಜೂರಾಗಿದೆ. ಈ ಪೈಕಿ 70,078 ರೈತರಿಗೆ 149.85 ಕೋಟಿ ರೂ. ಬೆಳೆ ವಿಮೆ ಪರಿಹಾರ ಪಾವತಿಸಲಾಗಿದೆ. ಬಾಕಿ ರೈತರಿಗೆ ಪರಿಹಾರ ಪಾವತಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಜನಸ್ನೇಹಿ:
ಜಿಲ್ಲೆಯಲ್ಲಿಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗೆ ವರದಾ ಪಡೆ ರಚಿಸಲಾಗಿದೆ. ಮಹಿಳೆಯರ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಇಳಿಮುಖವಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿಶಾಸಕ ನೆಹರು ಓಲೇಕಾರ, ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ನಗರಾಭಿವೃದ್ಧಿ ಅಧ್ಯಕ್ಷ ಶಿವಕುಮಾರ ಸಂಗೂರ, ತಾ.ಪಂ. ಅಧ್ಯಕ್ಷೆ ಕಮಲವ್ವ ಪಾಟೀಲ, ಜಿ.ಪಂ. ಸಿಇಒ ರಮೇಶ ದೇಸಾಯಿ, ಎಸ್ಪಿ ಕೆ.ಜಿ.ದೇವರಾಜ, ಯೋಗೇಶ್ವರ, ಡಾ.ಎನ್‌.ತಿಪ್ಪೇಸ್ವಾಮಿ, ಜಿ.ಎಸ್‌.ಶಂಕರ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ