ಆ್ಯಪ್ನಗರ

ಸಿಎಂ ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ ಮಠಾಧೀಶರು; ವಿಪಕ್ಷಗಳ ‘ಟಾರ್ಗೆಟ್ ಸಿಎಂ’ ವಿರುದ್ಧ ಗುಟುರು

ತಪ್ಪುಗಳಾದಾಗ ಕಾನೂನುಬದ್ಧವಾಗಿ ಏನು ಬೇಕಾಗಿತ್ತೋ ಅದನ್ನು ಮಾಡಿ ಅವರಿಗೆ ಬೇಕಾದ ಶಿಕ್ಷೆ ಕೊಟ್ಟು ಎಲ್ಲ ಜನರ ಹೃದಯ ಗೆಲ್ಲುವ ಕೆಲಸವನ್ನು ಎಲ್ಲ ಪಕ್ಷಗಳು ಮಾಡುತ್ತಿದ್ದವು. ಈಗ ದೊಡ್ಡ ದೊಡ್ಡ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಸಣ್ಣತನದ ವಿಚಾರಗಳನ್ನು ಇಟ್ಕೊಂಡು ರಾಜಕಾರಣ ಮಾಡೋದನ್ನು ನೋಡಿದ್ರೆ ಜನರಿಗೆ ನಾವು ಕಳಿಸಿದ ಚುನಾಯಿತ ಪ್ರತಿನಿಧಿಗಳು ಏನು ಮಾಡ್ತಿದ್ದಾರಪ್ಪಾ ಅನ್ನೋ ವಿಚಾರ ಬರ್ತಿದೆ ಎಂದು ಒಕ್ಕೂಟ ಬೇಸರ ವ್ಯಕ್ತಪಡಿಸಿದೆ. ಮುತ್ಸದ್ದಿ ರಾಜಕಾರಣಿಗಳು ಸಣ್ಣತನಕ್ಕೆ ಇಳಿತಿರೋದನ್ನು ನೋಡಿ ಸಮಾಜ ಅವಹೇಳನ ಮಾಡೋ ಸ್ಥಿತಿ ಬರಬಾರದು ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.

Edited byಚೇತನ್ ಓ.ಆರ್. | Vijaya Karnataka Web 1 Oct 2022, 10:51 am
ಹಾವೇರಿ: ಹಾವೇರಿ ಜಿಲ್ಲೆ ಮಠಾಧೀಶರ ಒಕ್ಕೂಟ ಸಿಎಂ ಬಸವರಾಜ್ ಬೊಮ್ಮಾಯಿ ಪರ ಬೆಂಬಲ ವ್ಯಕ್ತಪಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್ ಮಾಡಿರುವ ಪ್ರತಿಪಕ್ಷಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಪಕ್ಷಗಳು ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸುವಂತೆ ಸ್ವಾಮೀಜಿಗಳು ತಿಳಿಸಿದ್ದಾರೆ.
Vijaya Karnataka Web lingayat seers


ಹಾವೇರಿ ಜಿಲ್ಲಾ ಮಠಾಧೀಶರ ಒಕ್ಕೂಟ ಸಿಎಂ ಬಸವರಾಜ್ ಬೊಮ್ಮಾಯಿ ಪರ ಅಭಿಮತ ವ್ಯಕ್ತಪಡಿಸಿದೆ. ಈ ಕುರಿತಂತೆ 10 ಕ್ಕೂ ಅಧಿಕ ಮಠಾಧೀಶರು ಸಿಎಂ ಬೊಮ್ಮಾಯಿ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ನಡೆಸುತ್ತಿರುವ ಪೇಸಿಎಂ ಅಭಿಯಾನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PayCM: ಪೇ ಸಿಎಂ ಅಭಿಯಾನ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸಿಬ್ಬಂದಿಗೆ ಸಿಸಿಬಿ ನೋಟಿಸ್
ಪೇ‌ ಸಿಎಂ ಅಭಿಯಾನ ವೈಯಕ್ತಿಕವಾಗಿ ಒಬ್ಬ ಮುಖ್ಯಮಂತ್ರಿಯನ್ನು ಟಾರ್ಗೆಟ್ ಇಟ್ಕೊಂಡು ಮಾಡಿದ ಹುನ್ನಾರ ಎಂದು ಮಠಾಧೀಶರ ಒಕ್ಕೂಟ ಆರೋಪಿಸಿದೆ.ಇವರೆಗೆ ಇಂಥಾ ಹುನ್ನಾರವನ್ನು ಯಾವುದೇ ರಾಜಕಾರಣಿಗಳ ವಿರುದ್ದ ಮಾಡಿಲ್ಲ.

ತಪ್ಪುಗಳಾದಾಗ ಕಾನೂನುಬದ್ಧವಾಗಿ ಏನು ಬೇಕಾಗಿತ್ತೋ ಅದನ್ನು ಮಾಡಿ ಅವರಿಗೆ ಬೇಕಾದ ಶಿಕ್ಷೆ ಕೊಟ್ಟು ಎಲ್ಲ ಜನರ ಹೃದಯ ಗೆಲ್ಲುವ ಕೆಲಸವನ್ನು ಎಲ್ಲ ಪಕ್ಷಗಳು ಮಾಡುತ್ತಿದ್ದವು. ಈಗ ದೊಡ್ಡ ದೊಡ್ಡ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಸಣ್ಣತನದ ವಿಚಾರಗಳನ್ನು ಇಟ್ಕೊಂಡು ರಾಜಕಾರಣ ಮಾಡೋದನ್ನು ನೋಡಿದ್ರೆ ಜನರಿಗೆ ನಾವು ಕಳಿಸಿದ ಚುನಾಯಿತ ಪ್ರತಿನಿಧಿಗಳು ಏನು ಮಾಡ್ತಿದ್ದಾರಪ್ಪಾ ಅನ್ನೋ ವಿಚಾರ ಬರ್ತಿದೆ ಎಂದು ಒಕ್ಕೂಟ ಬೇಸರ ವ್ಯಕ್ತಪಡಿಸಿದೆ.

Pay CM Protest - ಪೇ ಸಿಎಂ ಅಭಿಯಾನ, ಕಾಂಗ್ರೆಸ್ ಗೆ ತಿರುಗುಬಾಣ: ವಿಜಯೇಂದ್ರ ಭವಿಷ್ಯ
ಮುತ್ಸದ್ದಿ ರಾಜಕಾರಣಿಗಳು ಸಣ್ಣತನಕ್ಕೆ ಇಳಿತಿರೋದನ್ನು ನೋಡಿ ಸಮಾಜ ಅವಹೇಳನ ಮಾಡೋ ಸ್ಥಿತಿ ಬರಬಾರದು ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ. ಸಣ್ಣ ವಿಚಾರಗಳನ್ನು ಬಿಟ್ಟು ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಿ ಅಂತಾ ಪ್ರತಿಪಕ್ಷಗಳಿಗೆ ಸ್ವಾಮಿಜಿಗಳು ಕಿವಿಮಾತು ಹೇಳಿದ್ದಾರೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ