ಆ್ಯಪ್ನಗರ

ಹೆಂಡತಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಹಾವೇರಿ: ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿ ಪತ್ನಿಯ ಕೊಲೆ ಮಾಡಿದ ಶಿಗ್ಗಾವಿ ತಾಲೂಕಿನ ಶ್ಯಾಡಂಬಿ ಗ್ರಾಮದ ಆರೋಪಿ ನೀಲಪ್ಪ ಸಿದ್ಧಪ್ಪ ಸಂಜೀವಣ್ಣನವರ ಎಂಬಾತನಿಗೆ ಒಂದನೇ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ್‌ ಕಿಣಿ ಅವರಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Vijaya Karnataka 6 Dec 2019, 5:00 am
ಹಾವೇರಿ: ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಿ ಪತ್ನಿಯ ಕೊಲೆ ಮಾಡಿದ ಶಿಗ್ಗಾವಿ ತಾಲೂಕಿನ ಶ್ಯಾಡಂಬಿ ಗ್ರಾಮದ ಆರೋಪಿ ನೀಲಪ್ಪ ಸಿದ್ಧಪ್ಪ ಸಂಜೀವಣ್ಣನವರ ಎಂಬಾತನಿಗೆ ಒಂದನೇ ಹೆಚ್ಚುವರಿ ಜಿಲ್ಲಾಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ್‌ ಕಿಣಿ ಅವರಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
Vijaya Karnataka Web man convicted for murdering wife
ಹೆಂಡತಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ


ಆರೋಪಿಯು ತನ್ನ ಪತ್ನಿಯ ಶೀಲದ ಮೇಲೆ ಸಂಶಯಪಟ್ಟು ಹೊಡಿಬಡಿ ಮಾಡಿ ಮಾನಸಿಕ ಕಿರುಕುಳ ನೀಡಿ ಮನೆಯಿಂದ ಹೊರಗೆ ಹಾಕಿದ ಹಿನ್ನೆಲೆಯಲ್ಲಿಕೊಲೆಯಾದ ನೀಲವ್ವಳು ತನ್ನ ಎರಡು ಮಕ್ಕಳನ್ನು ಕರೆದುಕೊಂಡು ತವರೂರಾದ ಮಂಟೂರಿನ ಮನೆಯಲ್ಲಿವಾಸವಾಗಿದ್ದಳು ಎನ್ನಲಾಗಿದೆ.

ಈ ಸಂದರ್ಭದಲ್ಲಿಆರೋಪಿಯು ಹಿರಿಯ ಮಗಳಿಗೆ ಸೀಮಂತ ಕಾರ್ಯ ಹಮ್ಮಿಕೊಂಡಿರುವುದಾಗಿ ಹೇಳಿ ಶ್ಯಾಡಂಬಿ ಗ್ರಾಮದ ತನ್ನ ಮನೆಗೆ ಕರೆದುಕೊಂಡು ಬಂದು ಹೆಂಡತಿಯ ಮೇಲೆ ಸೀಮೆಎಣ್ಣೆ ಹಾಕಿ ಬೆಂಕಿ ಹಚ್ಚಿದ ಪರಿಣಾಮ ಸುಟ್ಟಗಾಯಗಳಿಂದ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಲ್ಲಿಚಿಕಿತ್ಸೆಗೆ ದಾಖಲಾದಾಗ ಸಾವನ್ನಪ್ಪಿದ್ದಳು.

ಈ ಕುರಿತು ತಡಸ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿ ಶಿಗ್ಗಾಂವ ಪೊಲೀಸ್‌ ಠಾಣೆಯ ಸರ್ಕಲ್‌ ಪೊಲೀಸ್‌ ಇನ್ಸಪೆಕ್ಟರ್‌ ಅವರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆರೋಪ ರುಜುವಾತದ ಕಾರಣ ಭಾ.ದಂ.ಸಂ. ಕಲಂ 302 ಐಪಿಸಿರ ಅಡಿಯಲ್ಲಿಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದಲ್ಲಿಮೃತಳ ಮಕ್ಕಳಿಗೆ ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಡ ಎಂ ಗೆಜ್ಜಿಹಳ್ಳಿ ಅವರು ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ