ಆ್ಯಪ್ನಗರ

ಸಿಎಂ ನಿರ್ಧಾರಕ್ಕೆ ಮಾನೆ ವಿರೋಧ

ಅಕ್ಕಿಆಲೂರು: ಟ್ರ್ಯಾಕ್ಟರ್‌ ಹೊಂದಿರುವ ರೈತರು ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಿರ್ಧಾರವನ್ನು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ತೀವ್ರವಾಗಿ ವಿರೋಧಿಸಿದ್ದು, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ.

Vijaya Karnataka 6 Jun 2020, 5:00 am
ಅಕ್ಕಿಆಲೂರು: ಟ್ರ್ಯಾಕ್ಟರ್‌ ಹೊಂದಿರುವ ರೈತರು ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನಿರ್ಧಾರವನ್ನು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ತೀವ್ರವಾಗಿ ವಿರೋಧಿಸಿದ್ದು, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ.
Vijaya Karnataka Web mane opposition to cm decision
ಸಿಎಂ ನಿರ್ಧಾರಕ್ಕೆ ಮಾನೆ ವಿರೋಧ


ಸರಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಬೇಕು ಎನ್ನುವ ನಿರ್ಧಾರ ಸ್ವಾಗತಾರ್ಹ. ಸರಕಾರಿ ನೌಕರರಿಗೆ ನಿಗದಿತ ಸಮಯದಲ್ಲಿವೇತನ ಸಿಗುತ್ತದೆ. ಅತಿವೃಷ್ಟಿ, ಅನಾವೃಷ್ಟಿ, ಸಾಂಕ್ರಾಮಿಕ ರೋಗ ಸೇರಿದಂತೆ ಯಾವುದೇ ಸಂದಿಗ್ಧ ಸಂದರ್ಭ ಸೃಷ್ಟಿಯಾದರೂ ಸರಕಾರಿ ನೌಕರರ ಆದಾಯದಲ್ಲಿಯಾವುದೇ ವ್ಯತ್ಯಾಸ ಉಂಟಾಗದು. ಆದರೆ ರೈತರು ಶೇ.90 ರಷ್ಟು ಪ್ರಮಾಣದಲ್ಲಿಕೃಷಿ ಸಂಬಂಧಿ ಚಟುವಟಿಕೆಗಳಿಗಷ್ಟೇ ಟ್ರ್ಯಾಕ್ಟರ್‌ ಬಳಕೆ ಮಾಡುತ್ತಿದ್ದು, ಅನ್ಯ ಉದ್ದೇಶಗಳಿಗೆ ಬಳಸುವುದು ಅಪರೂಪವಾಗಿದೆ ಎಂದು ಮಾನೆ ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಸಂಪೂರ್ಣವಾಗಿ ಮಳೆಯನ್ನೇ ಅವಲಂಭಿಸಿದೆ. ಒಮ್ಮೆ ಅತಿವೃಷ್ಟಿ, ಮಗದೊಮ್ಮೆ ಅನಾವೃಷ್ಟಿಯಿಂದ ರೈತರು ಪದೇ ಪದೆ ಸಂಕಷ್ಟಕ್ಕೀಡಾಗುತ್ತಲೇ ಇದ್ದಾರೆ. ಹೀಗಿರುವಾಗ ಸಾಲಸೂಲ ಮಾಡಿ ಟ್ರ್ಯಾಕ್ಟರ್‌ ಖರೀದಿಸಿ, ತೊಂದರೆಯಲ್ಲಿರುವ ರೈತರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಬೇಕು ಎನ್ನುವ ನಿರ್ಧಾರದಿಂದ ಮುಖ್ಯಮಂತ್ರಿಗಳು ಹಿಂದೆ ಸರಿದು, ಕಾನೂನು ಕ್ರಮ ಕೈಗೊಳ್ಳುವುದನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ