ಆ್ಯಪ್ನಗರ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ 15ರಂದು ಸಾಮೂಹಿಕ ಪ್ರತಿಭಟನೆ

ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿರುವುದನ್ನು ವಿರೋಧಿಸಿ ಆಗಸ್ಟ್‌ 15ರಂದು ಸಾಮೂಹಿಕ ಪ್ರತಿಭಟನೆ ಮಾಡಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

Vijaya Karnataka 13 Aug 2020, 5:00 am
ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿರುವುದನ್ನು ವಿರೋಧಿಸಿ ಆಗಸ್ಟ್‌ 15ರಂದು ಸಾಮೂಹಿಕ ಪ್ರತಿಭಟನೆ ಮಾಡಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
Vijaya Karnataka Web 12 MANJU 2_23
ನಗರದ ಪ್ರವಾಸಿ ಮಂದಿರದಲ್ಲಿರಾಜ್ಯ ರೈತ ಸಂಘದ ಜಿಲ್ಲಾಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಸುದ್ದಿಗೋಷ್ಠಿಯಲ್ಲಿಮಾತನಾಡಿದರು.


ನಗರದ ಪ್ರವಾಸಿ ಮಂದಿರದಲ್ಲಿಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೋವಿಡ್‌-19 ಸಂದರ್ಭದಲ್ಲಿಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತಂದಿರುವ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ, ವಿದ್ಯುತ್‌ ಖಾಸಗೀಕರಣ ತಿದ್ದುಪಡಿ, ಬೀಜ ಕಾಯಿದೆ, ಭೂ ಸ್ವಾಧೀನ ಕಾಯಿದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಮಾದರಿ ಭೂ ಗುತ್ತಿಗೆ ಮಸೂದೆ ಕಾಯಿದೆಗಳನ್ನು ಶೀಘ್ರವೇ ಹಿಂಪಡೆಯುವಂತೆ ಒತ್ತಾಯಿಸಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಈ ವೇಳೆ ಪ್ರಗತಿಪರ, ದಲಿತ ಸೇನೆ, ಹಸಿರುಸೇನೆ ಹೀಗೆ ಎಲ್ಲರೈತ ಸಂಘಟನೆಗಳು ಸೇರಿ ಸಾಮೂಹಿಕ ನಾಯಕತ್ವದಲ್ಲಿಈಡೀ ರಾಜ್ಯಾದ್ಯಂತ ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲಜಿಲ್ಲಾಕಚೇರಿ ಹಾಗೂ ಮಹಾತ್ಮಾ ಗಾಂಧಿ ಪ್ರತಿಮೆ ಇರುವ ಸಾರ್ವಜನಿಕ ಸ್ಥಳಗಳಲ್ಲಿಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಪ್ರತಿಭಟನೆ ಮಾಡಲಾಗುವುದು. ಪ್ರತಿಭಟನೆಯಲ್ಲಿಜಿಲ್ಲೆಯ ಸುಮಾರು 500ಕ್ಕೂ ಹೆಚ್ಚಿನ ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ರೈತ ಮುಖಂಡ ಸುರೇಶ ಚಲವಾದಿ, ಜಾನ್‌ ಪುನೀತ್‌, ಜಗದೀಶ ಬಳ್ಳಾರಿ, ಶಿವಪ್ಪ ಕುಳೇನೂರ, ಶೇಖಪ್ಪ ಚಂದಪ್ಪನವರ ಇತರರು ಸುದ್ದಿಗೋಷ್ಠಿಯಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ