ಆ್ಯಪ್ನಗರ

ಬಿಸಿಯೂಟ ತಯಾರಕರಿಗೆ 4 ತಿಂಗಳಿನಿಂದ ಸಂಬಳ ನೀಡಿಲ್ಲ ; ಡಿಸಿಗೆ ಮನವಿ

ಹಾವೇರಿ: ಬಿಸಿಯೂಟ ತಯಾರಕ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್‌ (ಎಐಟಿಯುಸಿ) ಜಿಲ್ಲಾಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 13 Aug 2020, 5:00 am
ಹಾವೇರಿ: ಬಿಸಿಯೂಟ ತಯಾರಕ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್‌ (ಎಐಟಿಯುಸಿ) ಜಿಲ್ಲಾಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 12 MANJU 4_23
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಎಐಟಿಯುಸಿ ಜಿಲ್ಲಾಘಟಕ ವತಿಯಿಂದ ಪ್ರತಿಭಟನೆ ನಡೆಯಿತು.


ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಬಿಸಿಯೂಟ ತಯಾರಕರ ಪ್ರತಿಭಟನೆ ನಡೆಯಿತು. ಜಿಲ್ಲೆಯಲ್ಲಿ3909 ಮಹಿಳೆಯರು ಅಕ್ಷರ ದಾಸೋಹ ಬಿಸಿಯೂಟ ಯೋಜನೆಯಲ್ಲಿಕಳೆದ 16 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಸಿಯೂಟ ತಯಾರಕರಿಗೆ ಸತತ 4 ತಿಂಗಳಿನಿಂದ ಸಂಬಳ ನೀಡಿರುವುದಿಲ್ಲ. ಹಾಗಾಗಿ ಬಾಕಿ ಇರುವ ಸಂಭಾವನೆ, ಕೋವಿಡ್‌-19 ಮಹಾಮಾರಿ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದ ಬಿಸಿಯೂಟ ಸಿಬ್ಬಂದಿಗೆ 5000 ರೂ. ಪ್ರೋತ್ಸಾಹ ಧನ, ಪ್ರತಿ ತಿಂಗಳು ಮಾಸಿಕ ಸಂಭಾವನೆ, ಆಹಾರ ಧಾನ್ಯಗಳ ಕಿಟ್‌, ಬೇಸಿಗೆ ರಜೆ ಅವಧಿಯ 37 ದಿವಸಗಳ ಆಹಾರ ಪದಾರ್ಥಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

ಎಐಟಿಯುಸಿ ಗೌರವಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಕಾರ್ಯದರ್ಶಿ ರೇಖಮ್ಮ ಧನ್ನೂರ, ಜಿಲ್ಲಾಸಮಿತಿ ಅದ್ಯಕ್ಷ ಜಿ.ಡಿ ಪೂಜಾರ, ಸರೋಜಮ್ಮ ಹಿರೇಮಠ, ಲಲಿತಾ ಬುಶಟ್ಟಿ, ರಾಜೇಶ್ವರಿ ದೊಡ್ಡಮನಿ, ಲತಾ ಹಿರೇಮಠ, ನಿರ್ಮಲಾ ಬಂಕಾಪೂರ, ರೇಣುಕಾ ಶಿವಾಜಿ ಹಾಗೂ ನಾಗರತ್ನಾ ಕುಲಕರ್ಣಿ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ