ಆ್ಯಪ್ನಗರ

ಕೊರೊನಾ ಆತಂಕ: ಹಿರೇಕೆರೂರು ಸೀಲ್‌ಡೌನ್‌ಗೆ ಬಿ.ಸಿ.ಪಾಟೀಲ್ ಮನವಿ

ಹಾವೇರಿ ಜಿಲ್ಲೆಯ ಹಿರೇಕೆರೂರು ಪ್ರದೇಶದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲು ಸಚಿವ ಬಿಸಿ ಪಾಟೀಲ್‌ ಸೂಚನೆ ಮನವಿ ಮಾಡಿದ್ದಾರೆ.

Vijaya Karnataka Web 30 Jun 2020, 2:25 pm
ಹಾವೇರಿ : ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗೆಯಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಿರೇಕೆರೂರನ್ನು ಸೀಲ್‌ಡೌನ್ ಮಾಡುವಂತೆ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
Vijaya Karnataka Web bc patil


ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚೆತ್ತುಕೊಂಡಿರುವಂತೆ ಜನತೆಗೆ ಅವರು ಸೂಚಿಸಿದ್ದಾರೆ.

ಕೊರೊನಾ ಚಿಕಿತ್ಸೆಯ ಬಗ್ಗೆ ದೂರು, ಸರ್ವಪಕ್ಷ ಸಮಿತಿ ರಚನೆಗೆ ಸಿದ್ದರಾಮಯ್ಯ ಒತ್ತಾಯ

ಕೊರೊನಾ ಮಹಾಮಾರಿ ಹಿರೇಕೆರೂರಿಗೆ ಲಗ್ಗೆಯಿಟ್ಟಿದ್ದು, ಕೋವಿಡ್-19 ಸಾಮೂದಾಯಿಕವಾಗಿ ಪಸರಿಸುತ್ತಿದೆ. ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ, ಕೋಡ,ಸುತ್ಕೋಟೆ,ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ.

ಪ್ರತಿಯೊಬ್ಬರ ಜೀವ ಅವರವರ ಕೈಯಲ್ಲಿಯಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು.ನಮ್ಮ ಜೀವಕ್ಕೆ‌ನಾವೇ ಹೊಣೆ. ಆದಷ್ಟು ಸುರಕ್ಷತಾ ಕ್ರಮ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಬಿ ಸಿ ಪಾಟೀಲ್‌ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ