ಆ್ಯಪ್ನಗರ

ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ

ಹಿರೇಕೆರೂರು :ರಾಜ್ಯದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿರುವ ಉಪ್ಪಾರ ಸಮಾಜ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ನೀಡಿ ಸಮಾಜಕ್ಕೆ ಗೌರವ ನೀಡುವಂತೆ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಜೈಕುಮಾರ ಉಪ್ಪಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದ ಮುಖಂಡರಿಗೆ ಆಗ್ರಹಿಸಿದರು.

Vijaya Karnataka 23 May 2018, 5:00 am
ಹಿರೇಕೆರೂರು :ರಾಜ್ಯದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿರುವ ಉಪ್ಪಾರ ಸಮಾಜ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ನೀಡಿ ಸಮಾಜಕ್ಕೆ ಗೌರವ ನೀಡುವಂತೆ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಜೈಕುಮಾರ ಉಪ್ಪಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷ ದ ಮುಖಂಡರಿಗೆ ಆಗ್ರಹಿಸಿದರು.
Vijaya Karnataka Web minister of state for putturangara
ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ


ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಪ್ಪಾರ ಸಮಾಜದವರು 35ರಿಂದ 40 ಲಕ್ಷ ಇದ್ದಾರೆ. ಆದರೆ ರಾಜಕೀಯವಾಗಿ ಇದುವರೆಗೂ ಸಮಾಜಕ್ಕೆ ಯಾವುದೇ ಸ್ಥಾನಮಾನ ದೊರೆತಿಲ್ಲ. ಈಗ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮಾಜದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉಪ್ಪಾರ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ರಾಜ್ಯದ ಉಪ್ಪಾರ ಸಮಾಜದ ಜನರ ಆಗ್ರಹವಾಗಿದೆ. ಒಂದುವೇಳೆ ಸಚಿವ ಸ್ಥಾನ ನೀಡದಿದ್ದರೆ ಸಮಾಜದವರು ಒಟ್ಟು ಗೂಡಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ತಾಲೂಕಾ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ರುದ್ರೇಶ ಕೋಣನವರ, ಪ್ರಧಾನ ಕಾರ್ಯದರ್ಶಿ ಸುಧಾಮ ಮುದ್ದಣ್ಣನವರ, ನ್ಯಾಯವಾದಿ ಪ್ರಕಾಶ ಉಪ್ಪಾರ, ಸೋಮಪ್ಪ ಉಪ್ಪಾರ, ವೆಂಕಟೇಶ ಉಪ್ಪಾರ, ಮುತ್ತಣ್ಣ ಜಲಾಟಿ, ಮಲಕಪ್ಪ ಹಂಚಿನಮನಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ