ಆ್ಯಪ್ನಗರ

ಸಿದ್ದರಾಮಯ್ಯ, ಡಿಕೆಶಿ ನಡುವೆ ಹೊಂದಾಣಿಕೆ ಇಲ್ಲ, ಎಸ್‌ ಟಿ ಸೋಮಶೇಖರ್

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನಡುವೆ ಹೊಂದಾಣಿಕೆ ಇಲ್ಲ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 15 Jul 2020, 3:06 pm
ಹಾವೇರಿ: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವೆ ಹೊಂದಾಣಿಕೆ ಇಲ್ಲ ಎಂದು ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಹೊಂದಾಣಿಕೆ ಇಲ್ಲ ಹೇಳಿಕೆಯನ್ನು ನಿರಾಕರಿಸಿದ ಸಚಿವ ಸೋಮಶೇಖರ್, ಮೊದಲು ಅವರಿಬ್ಬರ ನಡುವೆಯೇ ಹೊಂದಾಣಿಕೆ ಇಲ್ಲ ಎಂದರು.
Vijaya Karnataka Web st somashekar


ಹಾವೇರಿಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷದ ಬಗ್ಗೆ ಸುಮ್ಮನೆ ಮಾತನಾಡುತ್ತಾರೆ. ನಾವೆಲ್ಲರೂ ಮುಖ್ಯಮಂತ್ರಿ ಬಿಎಸ್‌ವೈ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೇವಲ ಪ್ರಚಾರಕ್ಕಾಗಿ ಅವರು ಜನರ ದಿಕ್ಕನ್ನು ಬೇರೆ ಕಡೆ ಸೆಳೆಯಲು ಈ ಕೊರೊನಾದ ಸಂಕಷ್ಟದ ಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪಿಯುಸಿ ಫಲಿತಾಂಶ ಕುಸಿತಕ್ಕೆ ಸುರೇಶ್‌ ಕುಮಾರ್‌ ಹೊಣೆ! ಸಿದ್ದರಾಮಯ್ಯ ಆರೋಪ

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆ

ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ವಿಚಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಈ ನಿಟ್ಟಿನಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಬಿಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ರೈತರಿಗೆ ನಮ್ಮ ಬೆಳೆ ನಮ್ಮ ಹಕ್ಕು ಅಧಿಕಾರ

ಕೊರೊನಾ ನಿರ್ವಹಣೆಗೆ ಹೈಕೋರ್ಟ್‌ ಅತೃಪ್ತಿ, ಸರಕಾರಕ್ಕೆ ಮತ್ತಷ್ಟು ಪ್ರಶ್ನೆ

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೇ ಅನುಕೂಲವಾಗಿದೆ. ಇದು ಕೇಂದ್ರ ಸರ್ಕಾರ ಉತ್ತಮ ಯೋಜನೆಯಾಗಿದೆ. ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಹಕ್ಕನ್ನು ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡಬಹುದಾಗಿದೆ. ಈ ಮೂಲಕ ನಮ್ಮ ಬೆಳೆ ನಮ್ಮ ಹಕ್ಕು ಎಂಬುದು ರೈತರ ಮಂತ್ರವಾಗಿದೆ. ಅವರ ಬೆಳೆಗಳಿಗೆ ಅವರೇ ಬೆಲೆಯನ್ನು ನಿರ್ಧರಿಸುವ ಕಾಲ ಈಗ ಬಂದಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ