ಆ್ಯಪ್ನಗರ

‘ಮೋದಿ ಜನಮನ್ನಣೆಗೆ ಪಾತ್ರವಾದ ಪ್ರಧಾನಿ’

ರಾಣೇಬೆನ್ನೂರ :ಪ್ರಧಾನಿ ಮೋದಿ ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಹಗರಣಮುಕ್ತ ಸರಕಾರ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ ಎಂದು ಸ್ಥಳೀಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೇಲಗಾರ ಹೇಳಿದರು.

Vijaya Karnataka 28 May 2018, 5:00 am
ರಾಣೇಬೆನ್ನೂರ :ಪ್ರಧಾನಿ ಮೋದಿ ನಾಲ್ಕು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಹಗರಣಮುಕ್ತ ಸರಕಾರ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ ಎಂದು ಸ್ಥಳೀಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕೇಲಗಾರ ಹೇಳಿದರು.
Vijaya Karnataka Web modis prime minister
‘ಮೋದಿ ಜನಮನ್ನಣೆಗೆ ಪಾತ್ರವಾದ ಪ್ರಧಾನಿ’


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ, ಕೈಗಾರಿಕೆ, ಶಿಕ್ಷ ಣ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಾಗೂ ಸ್ತ್ರೀಯರ ಅಭ್ಯುದಯಕ್ಕಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮೋದಿ ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ತಮ್ಮ ಕಾರ್ಯಕ್ಷ ಮತೆ ಹಾಗೂ ದೂರದೃಷ್ಟಿಯ ಆಲೋಚನೆಗಳಿಂದಾಗಿ ಇಂದು ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ. ಅದಕ್ಕಾಗಿ ಪಕ್ಷ ದ ವತಿಯಿಂದ ಹಾಗೂ ವೈಯಕ್ತಿಕವಾಗಿ ಮೋದಿ ಕಾರ್ಯವನ್ನು ಮನಃಪೂರ್ವಕವಾಗಿ ಶ್ಲಾಘಿಸುತ್ತೇನೆ. ತಮ್ಮ ಭ್ರಷ್ಟಾಚಾರ ಪ್ರಕರಣಗಳು ಬಯಲಿಗೆ ಬಾರದಂತೆ ತಡೆಯುವ ಸಲುವಾಗಿ ತೃತೀಯ ರಂಗ ರಚನೆಯಾಗಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್‌ ಪಕ್ಷ ತನ್ನ ಆಡಳಿತಾವಧಿಯಲ್ಲಿ ಮಾಡಿದ ಭ್ರಷ್ಟಾಚಾರ ಮುಚ್ಚಿ ಹಾಕಲು ಜೆಡಿಎಸ್‌ ಜತೆ ಸೇರಿ ಸರಕಾರ ರಚಿಸಿದೆ. ಆದರೆ ಅಧಿಕಾರದ ದಾಹದಿಂದಾಗಿ ಇದು ಬಹಳ ದಿನ ಬಾಳುವುದಿಲ್ಲ. ಅಧಿಕಾರಕ್ಕೆ ಬಂದ 24 ಗಂಟೆಯೊಳಗಾಗಿ ರೈತರ ಸಾಲಮನ್ನಾ ಮಾಡುವುದಾಗಿ ತಿಳಿಸಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ವಾಗ್ದಾನವನ್ನು ಮರೆತಿದ್ದಾರೆ. ಈ ನಿಟ್ಟಿನಲ್ಲಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದರೆ ಅವರ ಹೋರಾಟಕ್ಕೆ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. ಯಾರೇ ಮಾಡಲಿ ರೈತರ ಸಾಲಮನ್ನಾ ಆದರೆ ಸಾಕು ಎಂಬುದು ಪಕ್ಷ ದ ದೃಢ ನಿಲುವಾಗಿದೆ ಎಂದರು.

ಪಕ್ಷ ದ ನಗರ ಘಟಕದ ಅಧ್ಯಕ್ಷ ಚೋಳಪ್ಪ ಕಸವಾಳ ಮಾತನಾಡಿದರು. ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ, ಕೆ.ಶಿವಲಿಂಗಪ್ಪ, ಎ.ಬಿ.ಪಾಟೀಲ, ಮಂಜುಳಾ ಹತ್ತಿ, ಗಂಗಮ್ಮ ಹಾವನೂರ ಮತ್ತು ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ