ಆ್ಯಪ್ನಗರ

ನರೇಗಾ ಪರಿಣಾಮಕಾರಿ ಅನುಷ್ಠಾನ ಅಗತ್ಯ

ಹಾನಗಲ್ಲ: ತಾಲೂಕಿನ ಹೊಂಕಣ ಗ್ರಾಮ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆಯು ಶೇಷಗಿರಿ ಗ್ರಾಮದ ರಂಗ ಮಂದಿರದಲ್ಲಿ ಶನಿವಾರ ನಡೆಯಿತು.

Vijaya Karnataka 7 Jul 2019, 5:00 am
ಹಾನಗಲ್ಲ: ತಾಲೂಕಿನ ಹೊಂಕಣ ಗ್ರಾಮ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆಯು ಶೇಷಗಿರಿ ಗ್ರಾಮದ ರಂಗ ಮಂದಿರದಲ್ಲಿ ಶನಿವಾರ ನಡೆಯಿತು.
Vijaya Karnataka Web HVR-06HGL1


ತಹಸೀಲ್ದಾರ್‌ ಗಂಗಪ್ಪ. ಎಂ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಕಾಮಗಾರಿಗಳು ವೇಗ ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಜನಸ್ಪಂದನ ಸಭೆಗಳು ನಿಯಮಿತವಾಗಿ ನಡೆಯಬೇಕು. ಪ್ರತಿಯೊಂದು ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಇದರಿಂದ ಅವಕಾಶ ಸಿಗುತ್ತದೆ. ಪ್ರತಿ ಶನಿವಾರ ಸುತ್ತಲಿನ 3 ಗ್ರಾ.ಪಂ ಒಳಗೊಂಡು ಒಂದೇ ಸ್ಥಳದಲ್ಲಿ ಜನಸ್ಪಂಸದನೆ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಶೇಷಗಿರಿ ಗ್ರಾಮದಲ್ಲಿ ವಿದ್ಯಾರ್ಥಿ ವಸತಿ ನಿಲಯ ಸ್ಥಾಪಿಸಬೇಕು, ಗ್ರಾಮಕ್ಕೆ ಸಂಪರ್ಕದ ರಸ್ತೆ ಸುಧಾರಣೆ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಬಸ್‌ ನಿಲ್ದಾಣಗಳನ್ನು ಸುವ್ಯವಸ್ಥಿತ ಇಡಬೇಕು. ಗ್ರಾಮಕ್ಕೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಸಮರ್ಪಕವಾಗಿ ನಡೆಯಬೇಕು. ಬೆಳೆಗಳಿಗೆ ಕೀಟ, ರೋಗ ಬಾಧೆ ಹರಡದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂಬ ವಿಷಯಗಳನ್ನು ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು.

ಜಿ.ಪಂ ಸದಸ್ಯ ಟಾಕನೌಡ ಪಾಟೀಲ, ತಾ.ಪಂ ಸದಸ್ಯ ರಾಮಣ್ಣ ಶೇಷಗಿರಿ, ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ, ಗ್ರಾ.ಪಂ ಅಧ್ಯಕ್ಷ ಜಗದೀಶ ಚಂದಣ್ಣನವರ, ವಿವಿಧ ಇಲಾಖೆ ಅಧಿಕಾರಿಗಳಾದ ಬಸವರಾಜ ಪರಮಶೆಟ್ಟಿ, ಆರ್‌.ಸರ್ವೇಶ, ಸಂಗಮೇಶ ಹಕ್ಲಪ್ಪನವರ, ಆರ್‌.ಎಂ.ಸೊಪ್ಪಿಮಠ, ಮಂಜುನಾಥ ಬಣಕಾರ, ಗೋವಿಂದ ಚಪ್ಪರ, ಡಾ.ಗಿರೀಶ ರಡ್ಡೇರ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ