ಆ್ಯಪ್ನಗರ

ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡಲು ಆಗ್ರಹ

ಹಾವೇರಿ: ದಲಿತ ಸಮುದಾಯದ ಶಾಸಕರಾದ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡದೇ ಚಲವಾದಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಜಿಲ್ಲಾ ಚಲವಾದಿ ಮಹಾಸಭಾದ ಅಧ್ಯಕ್ಷ ಶಂಭು ಕಳಸದ ಆರೋಪಿಸಿದರು.

Vijaya Karnataka 28 Aug 2019, 5:00 am
ಹಾವೇರಿ: ದಲಿತ ಸಮುದಾಯದ ಶಾಸಕರಾದ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡದೇ ಚಲವಾದಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಜಿಲ್ಲಾ ಚಲವಾದಿ ಮಹಾಸಭಾದ ಅಧ್ಯಕ್ಷ ಶಂಭು ಕಳಸದ ಆರೋಪಿಸಿದರು.
Vijaya Karnataka Web nehru olekkara demands ministerial post
ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡಲು ಆಗ್ರಹ


ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಬಲಗೈ ಸಮುದಾಯದ ಏಕೈಕ ಶಾಸಕರಾಗಿರುವ ನೆಹರೂ ಓಲೇಕಾರ ಅವರು ಈಗಾಗಲೇ ಮೂರು ಬಾರಿ ಶಾಸಕರಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮತ್ತು ಪಕ್ಷದ ನಿಷ್ಠಾವಂತರಾಗಿ ಕೆಲಸ ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನರ ಸೇವೆ ಮಾಡುತ್ತಿದ್ದಾರೆ. ಕಳೆದ ಬಾರಿ ಶಾಸಕರಾಗಿದ್ದಾಗ ಬಡ ಜನರಿಗೆ ಆಶ್ರಯ ಮನೆ, ರಸ್ತೆ, ಮೆಡಿಕಲ್‌ ಕಾಲೇಜ್‌ ಮಂಜೂರು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಸಾಕಷ್ಟು ಪರಿಹರಿಸಿದ್ದಾರೆ. ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಕ್ಕಿದರೆ ಜಿಲ್ಲೆಯೂ ಇನ್ನೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದರು.

ರಾಜ್ಯದಲ್ಲಿ ಚಲವಾದಿ ಸಮುದಾಯದಲ್ಲಿ 6 ಜನ ಶಾಸಕರಿದ್ದು 6 ಜನರಲ್ಲಿ ಒಬ್ಬರಿಗೂ ಸಚಿವ ಸ್ಥಾನ ನೀಡದೆ ಇರುವುದು ನೋವನ್ನುಂಟು ಮಾಡಿದೆ ಎಂದು ತಿಳಿಸಿದರು.

ಸದ್ಯದಲ್ಲಿ ಸಂಪುಟ ವಿಸ್ತರಣೆಯಲ್ಲಿ ಸೂಕ್ತ ಸಚಿವ ಸ್ಥಾನಮಾನ ನೀಡಿ ಚಲವಾದಿ ಸಮುದಾಯಕ್ಕೆ ಗೌರವನ್ನು ತಂದು ಕೊಡಬೇಕೆಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಒತ್ತಾಯಿಸಿದರು.

ನೆಹರು ಓಲೇಕಾರರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ, ಚಿತ್ರದುರ್ಗ, ದಾವಣಗೇರಿ ಸೇರಿದಂತೆ ಎಲ್ಲ ಜಿಲ್ಲೆಗಳಿಂದ ಸಮುದಾಯದ ಜನರಿಂದ ಒತ್ತಾಯಿಸಲಾಗುತ್ತಿದೆ. ಒಂದು ವೇಳೆ ಸಚಿವ ಸ್ಥಾನ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡ ಸುರೇಶ ಚಲವಾದಿ ಮಾತನಾಡಿ ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಡಜನ ಸಮಸ್ಯೆಗಳನ್ನು ಆಲಿಸುವವರಿಲ್ಲಾಗಿದ್ದಾರೆ. ಈ ಬಾರಿ ಶಾಸಕ ನೆಹರು ಓಲೇಕಾರ ಅವರು ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತಿದ್ದಾರೆ ಬೇಡಿಕೆಗಳನ್ನು ಈಡೇರಿಸುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರಿಗೆ ಇನ್ನಷ್ಟು ಶಕ್ತಿ ಬಲಪಡಿಸಲು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಶುರಾಮ್‌ ಚಲವಾದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ