ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಶಾಶ್ವತ ಕಾಯಕಲ್ಪ ನೀಡಲು ಆಗ್ರಹ

ಹಾವೇರಿ: ಉತ್ತರ ಕರ್ನಾಟಕದ 17 ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ನೀಡುವ ಜತೆಗೆ ಶಾಶ್ವತ ಕಾಯಕಲ್ಪ ಒದಗಿಸಲು ಸರಕಾರ 15 ದಿನಗಳೊಳಗೆ ಮುಂದಾಗಬೇಕು. ತಪ್ಪಿದಲ್ಲಿರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜೇಶ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Vijaya Karnataka 31 Oct 2019, 5:00 am
ಹಾವೇರಿ: ಉತ್ತರ ಕರ್ನಾಟಕದ 17 ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ನೀಡುವ ಜತೆಗೆ ಶಾಶ್ವತ ಕಾಯಕಲ್ಪ ಒದಗಿಸಲು ಸರಕಾರ 15 ದಿನಗಳೊಳಗೆ ಮುಂದಾಗಬೇಕು. ತಪ್ಪಿದಲ್ಲಿರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜೇಶ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web neighboring victims demand permanent help
ನೆರೆ ಸಂತ್ರಸ್ತರಿಗೆ ಶಾಶ್ವತ ಕಾಯಕಲ್ಪ ನೀಡಲು ಆಗ್ರಹ


ಹಾವೇರಿಯಲ್ಲಿಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿಬೆಳಗಾವಿಯಲ್ಲಿನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರ 50 ಸಾವಿರ ಕೋಟಿ ವಿಶೇಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿನಮ್ಮನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಹುಬ್ಬಳ್ಳಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲೂಪ್ರತಿಭಟನೆ ಕೈಗೊಂಡ ಸಂದರ್ಭದಲ್ಲೂಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವ ಹೋರಾಟ ಹತ್ತಿಕ್ಕುವ ಕೇಂದ್ರ ಜತೆಗೆ ರಾಜ್ಯ ಸರಕಾರಗಳ ಕ್ರಮ ಖಂಡನೀಯ.

ಉತ್ತರ ಕರ್ನಾಟಕದಲ್ಲಿಹಿಂದೆಂದೂ ಕಂಡರಿಯದ ನೆರೆ ಪರಿಸ್ಥಿತಿ ಉಂಟಾಗಿ ರೈತರು ಬೆಳೆ, ಮನೆ ಮತ್ತು ಬದುಕು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಇಂಥ ಗಂಭೀರ ಪರಿಸ್ಥಿತಿಯಲ್ಲಿಅವರ ನೆರವಿಗೆ ಧಾವಿಸುವುದು ಕೇಂದ್ರ ಸರಕಾರದ ಮಾನವೀಯ ಕರ್ತವ್ಯ. ಆದರೆ ಪ್ರಧಾನಿಗೆ ಅನ್ಯ ರಾಜ್ಯ ಮತ್ತು ದೇಶಗಳ ಬಗೆಗೆ ಅನುಕಂಪ ಇದೆಯೇ ಹೊರತು ಕರ್ನಾಟಕದ ಮೇಲೆ ಇಲ್ಲಎನ್ನುವುದು ಅವರ ದಿವ್ಯ ನಿರ್ಲಕ್ಷ್ಯವೇ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರಕಾರ ಇತಿಮಿತಿ ಅನುದಾನದಲ್ಲೇ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುತ್ತಿರುವುದು ಅಭಿನಂದನಾರ್ಹ. ಆದರೆ ಈ ಚಿಕ್ಕಾಸು ಪರಿಹಾರದಿಂದ ಬೀದಿ ಪಾಲಾಗಿರುವ ಸಂತ್ರಸ್ತರಿಗೆ ಏನೂ ಉಪಯೋಗವಿಲ್ಲ. ಈ ಹಿನ್ನೆಲೆಯಲ್ಲಿಪ್ರಧಾನಿ ಮೋದಿ ಅವರ ಗಮನ ಸೆಳೆದು ಸಿ.ಎಂ ಯಡಿಯೂರಪ್ಪ ಇನ್ನು 15 ದಿನಗಳೊಳಗೆ ಶಾಶ್ವತ ಪರಿಹಾರ ಕ್ರಮಕ್ಕೆ ಮುಂದಾಗಬೇಕು. ತಪ್ಪಿದಲ್ಲಿಹಾವೇರಿ ಸೇರಿದಂತೆ ರಾಜ್ಯಾದ್ಯಂತ ನಮ್ಮ ವೇದಿಕೆ ಉಗ್ರ ಪ್ರತಿಭಟನೆ ನಡೆಸುವುದು ಖಂಡಿತ. ಈ ವೇಳೆ ಏನೇ ಅವಘಡ ಸಂಭವಿಸಿದರೂ ಇದಕ್ಕೆ ನೇರವಾಗಿ ರಾಜ್ಯ ಸರಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧ್ಯಕ್ಷ ನಿಂಗಪ್ಪ ಬೆಂಚಳ್ಳಿ, ಸುಭಾಸ ವಾಲ್ಮೀಕಿ, ಆರ್‌.ಎಂ. ಬಡಿಗೇರ, ಬಸವರಾಜ ಗುರಳಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ