ಬ್ಯಾಡಗಿ: ಪಟ್ಟಣದ ವಿವಿಧೆಡೆ ಮಿಂಚಿನ ದಾಳಿ ನಡೆಸಿದ ಪುರಸಭೆ ಸಿಬ್ಬಂದಿ ಆದೇಶ ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 85 ಕೆ.ಜಿ.ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಲ್ಲದೇ 5500 ರೂ. ದಂಡ ವಸೂಲಿ ಮಾಡಿದ್ದಾರೆ.
ಪ್ಲಾಸ್ಟಿಕ್ ಮಾರಾಟ ಮಾಡದಂತೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ವ್ಯಾಪಾರಸ್ಥರು 40 ಮೈಕ್ರಾನ್ಗಿಂತ ಹೆಚ್ಚಾಗಿರುವ ಪ್ಲಾಸ್ಟಿಕ್ ಮಾರಾಟ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾಧಿಕಾರಿ ವಿ.ಎಂ.ಪೂಜಾರ, ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಕರಪತ್ರಗಳನ್ನು ಹಂಚಿ ಸೂಚನೆ ನೀಡಿದ್ದಲ್ಲದೇ ಎಚ್ಚರಿಕೆ ನೀಡಲಾಗಿತ್ತು. ಆದಾಗ್ಯೂ ಬಹುತೇಕ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡು.ಬಂದಿದೆ ಬರುವ ದಿನಗಳಲ್ಲಿ ನಿತ್ಯವೂ ಮಿಂಚಿನ ಸಂಚಾರ ನಡೆಸುವುದಾಗಿ ಎಚ್ಚರಿಸಿದರು.
ಲೈಸೆನ್ಸ್ ರದ್ದು: ಪ್ಲಾಸ್ಟಿಕ್ ನಿಷೇಧಿಸಿರುವ ಕುರಿತು ಪುರಸಭೆಯಿಂದಲೂ ನೋಟಿಸ್ ಜಾರಿ ಮಾಡಲಾಗಿದೆ. ನಿಷೇಧದ ನಡುವೆಯೂ ಕೆಲ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ನ್ನೇ ಮಾರಾಟ ಮಾಡುತ್ತಿದ್ದಾರೆ. ಇಂದೇ ಎಚ್ಚೆತ್ತುಕೊಳ್ಳುವ ಮೂಲಕ ಮಾರಾಟದಿಂದ ಹಿಂದೆ ಸರಿಯಬೇಕು ಇಲ್ಲದಿದ್ದಲ್ಲಿ ಲೈಸನ್ಸ್ ರದ್ದುಪಡಿಸಲಾ ಗುವುದಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವುದಾಗಿ ಎಚ್ಚರಿಸಿದರು.
ಪರಿಸರ ಅಭಿಯಂತರ ಹರೀಶ್ ಮಾತನಾಡಿ, ಪ್ಲಾಸ್ಟಿಕ್ ಅಪಾಯಕಾರಿ ವಸ್ತುವಾಗಿದ್ದು, ಜನ ಜಾನುವಾರುಗಳಿಗೆ ಮಾರಣಾಂತಿಕವಾಗಿದೆ. ಇದರ ಬಳಕೆಯನ್ನು ಸರಕಾರ ನಿಷೇಧಿಸಿದ್ದು, ವ್ಯಾಪಾರಸ್ಥರು ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ರವಿಕೀರ್ತಿ, ಎಲ್.ಶಂಕರ, ತಬಸ್ಸುಮ್ಬಾನು, ಮಾಲತೇಶ್ ಹಳ್ಳಿ ಇತರರು ಉಪಸ್ಥಿತರಿದ್ದರು.
ಪ್ಲಾಸ್ಟಿಕ್ ಮಾರಾಟ ಮಾಡದಂತೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ವ್ಯಾಪಾರಸ್ಥರು 40 ಮೈಕ್ರಾನ್ಗಿಂತ ಹೆಚ್ಚಾಗಿರುವ ಪ್ಲಾಸ್ಟಿಕ್ ಮಾರಾಟ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾಧಿಕಾರಿ ವಿ.ಎಂ.ಪೂಜಾರ, ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಕರಪತ್ರಗಳನ್ನು ಹಂಚಿ ಸೂಚನೆ ನೀಡಿದ್ದಲ್ಲದೇ ಎಚ್ಚರಿಕೆ ನೀಡಲಾಗಿತ್ತು. ಆದಾಗ್ಯೂ ಬಹುತೇಕ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡು.ಬಂದಿದೆ ಬರುವ ದಿನಗಳಲ್ಲಿ ನಿತ್ಯವೂ ಮಿಂಚಿನ ಸಂಚಾರ ನಡೆಸುವುದಾಗಿ ಎಚ್ಚರಿಸಿದರು.
ಲೈಸೆನ್ಸ್ ರದ್ದು: ಪ್ಲಾಸ್ಟಿಕ್ ನಿಷೇಧಿಸಿರುವ ಕುರಿತು ಪುರಸಭೆಯಿಂದಲೂ ನೋಟಿಸ್ ಜಾರಿ ಮಾಡಲಾಗಿದೆ. ನಿಷೇಧದ ನಡುವೆಯೂ ಕೆಲ ವ್ಯಾಪಾರಸ್ಥರು ನಿಷೇಧಿತ ಪ್ಲಾಸ್ಟಿಕ್ನ್ನೇ ಮಾರಾಟ ಮಾಡುತ್ತಿದ್ದಾರೆ. ಇಂದೇ ಎಚ್ಚೆತ್ತುಕೊಳ್ಳುವ ಮೂಲಕ ಮಾರಾಟದಿಂದ ಹಿಂದೆ ಸರಿಯಬೇಕು ಇಲ್ಲದಿದ್ದಲ್ಲಿ ಲೈಸನ್ಸ್ ರದ್ದುಪಡಿಸಲಾ ಗುವುದಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವುದಾಗಿ ಎಚ್ಚರಿಸಿದರು.
ಪರಿಸರ ಅಭಿಯಂತರ ಹರೀಶ್ ಮಾತನಾಡಿ, ಪ್ಲಾಸ್ಟಿಕ್ ಅಪಾಯಕಾರಿ ವಸ್ತುವಾಗಿದ್ದು, ಜನ ಜಾನುವಾರುಗಳಿಗೆ ಮಾರಣಾಂತಿಕವಾಗಿದೆ. ಇದರ ಬಳಕೆಯನ್ನು ಸರಕಾರ ನಿಷೇಧಿಸಿದ್ದು, ವ್ಯಾಪಾರಸ್ಥರು ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿ ರವಿಕೀರ್ತಿ, ಎಲ್.ಶಂಕರ, ತಬಸ್ಸುಮ್ಬಾನು, ಮಾಲತೇಶ್ ಹಳ್ಳಿ ಇತರರು ಉಪಸ್ಥಿತರಿದ್ದರು.