ಆ್ಯಪ್ನಗರ

200 ಜನರ ನೇತ್ರ ತಪಾಸಣೆ

ಅಕ್ಕಿಆಲೂರು : ಇಲ್ಲಿನ ವಿರಕ್ತಮಠದ ಲಿಂ.ಚನ್ನವೀರ ಸ್ವಾಮೀಜಿ ಜನ್ಮಶತಮಾನೋತ್ಸವದ ಅಂಗವಾಗಿ ಗುರುವಾರ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಸ್ಥಳೀಯ ಸ್ನೇಹಮೈತ್ರಿ ನೇತ್ರದಾನಿಗಳ ಬಳಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ನೇತ್ರ ತಪಾಸಣೆ ಶಿಬಿರದಲ್ಲಿ 200 ಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಯಿತು.

Vijaya Karnataka 30 Nov 2018, 5:00 am
ಅಕ್ಕಿಆಲೂರು : ಇಲ್ಲಿನ ವಿರಕ್ತಮಠದ ಲಿಂ.ಚನ್ನವೀರ ಸ್ವಾಮೀಜಿ ಜನ್ಮಶತಮಾನೋತ್ಸವದ ಅಂಗವಾಗಿ ಗುರುವಾರ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಸ್ಥಳೀಯ ಸ್ನೇಹಮೈತ್ರಿ ನೇತ್ರದಾನಿಗಳ ಬಳಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ನೇತ್ರ ತಪಾಸಣೆ ಶಿಬಿರದಲ್ಲಿ 200 ಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಯಿತು.
Vijaya Karnataka Web HVR-29AKR4


ಶಿಬಿರ ಉದ್ಘಾಟಿಸಿದ ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ನಮ್ಮ ದೇಶದಲ್ಲಿ ಅಂಧತ್ವದಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಿದೆ. ಸಾವಿನ ಬಳಿಕ ನೇತ್ರದಾನದ ಬಗೆಗೆ ಜಾಗೃತಿಯ ಕೊರತೆ ಇರುವುದರಿಂದ ಅಂಧರ ಸಂಖ್ಯೆ ಕಡಿಮೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಸಾವಿನಲ್ಲಿಯೂ ಸಾರ್ಥಕತೆ ಮೆರೆಯುವ ನಿಟ್ಟಿನಲ್ಲಿ ಸಾವಿನ ನಂತರ ನೇತ್ರದಾನಕ್ಕೆ ಸಂಕಲ್ಪಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ 61 ಜನ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು. 4 ಜನ ದೇಹದಾನ ಹಾಗೂ 15 ಜನ ಸಾವಿನ ಬಳಿಕ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದರು. ವಿಜಯಪುರದ ಷಣ್ಮುಖಾರೂಢ ಮಠದ ಅಭಿನವ ಸಿದ್ದಾರೂಢ ಸ್ವಾಮೀಜಿ, ಮೂಲೆಗದ್ದೆಯ ಚನ್ನಬಸವ ಸ್ವಾಮೀಜಿ, ಕೂಡಲದ ಗುರುಮಹೇಶ್ವರ ಸ್ವಾಮೀಜಿ, ಸ್ಥಳೀಯ ವಿರಕ್ತಮಠದ ಶಿವಬಸವ ಸ್ವಾಮೀಜಿ, ಮುತ್ತಿನಕಂತಿಮಠದ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಮಾಳೋದೆ, ಡಾ.ಎಸ್‌.ಎಂ.ಹುಣಸಿಕಟ್ಟಿ, ಡಾ.ಎಸ್‌.ಎಸ್‌.ಏರಿಮನಿ, ತಂತ್ರಜ್ಞರಾದ ರವಿಕುಮಾರ, ವೀರೇಶ್‌, ನಾಗರಾಜ್‌ ಪಾವಲಿ, ಕರಬಸಪ್ಪ ಗೊಂದಿ, ಪ್ರಕಾಶ್‌ ಮೋಟಗಿ ಸೇರಿದಂತೆ ಜನ್ಮಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ