ರಾಣೇಬೆನ್ನೂರ : ಭವಿಷ್ಯದ ಪೀಳಿಗೆ ಸಲುವಾಗಿ ನಾವೆಲ್ಲರೂ ಜಲ ಸಂರಕ್ಷಣೆಯಲ್ಲಿತೊಡಗಿಸಿಕೊಳ್ಳಬೇಕು ಹಾಗೂ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ನಗರಸಭೆ ಪೌರಾಯುಕ್ತ ಡಾ.ಮಹಾಂತೇಶ ಎನ್. ಹೇಳಿದರು.
ನಗರದ ಸ್ಟೇಷನ್ ರಸ್ತೆ ವರ್ತಕರ ಸಮುದಾಯ ಭವನದಲ್ಲಿಗುರುವಾರ ಏರ್ಪಡಿಸಲಾಗಿದ್ದ ಸ್ಥಳೀಯ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆಯ(ನೀಡ್ಸ್) ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿಪರಿಸರ ಜಾಗೃತಿ ಮತ್ತು ಜೈವಿಕ ಇಂಧನ ಬಳಕೆ ಕುರಿತು ಜನರಲ್ಲಿಅರಿವು ಮೂಡಿಸುವ ಕಾರ್ಯ ಮಾಡುತ್ತಿರುವ ನೀಡ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಗರದಲ್ಲಿಯೂ ಕೂಡ ನೀಡ್ಸ್ ಸಂಸ್ಥೆ ಸಹಯೋಗದಲ್ಲಿನಗರಸಭೆ ವತಿಯಿಂದ 500 ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ. ನಗರಸಭೆ ವತಿಯಿಂದ ಬರುವ ಅ.2ರಿಂದ ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ನಗರದ ಜನತೆ ಸಹಕಾರ ನೀಡಬೇಕು ಎಂದರು.
ಹಾವೇರಿ ಹೊಸಮಠದ ಬಸವಶಾಂತಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಮಂಜುನಾಥ, ಸುಜಲಾನ್ ಫೌಂಡೇಶನ್ದ ದೀಪಕ ಕ್ಷೀರಸಾಗರ, ಫೇವಾರ್ಡ್ ಸಂಸ್ಥೆಯ ಆಂಜನೇಯರಡ್ಡಿ, ಕೃಷಿ ಇಲಾಖೆ ಉಪನಿರ್ದೇಶಕಿ ಸ್ಪೂರ್ತಿ, ಕರ್ನಾಟಕ ಸಂಘದ ಅಧ್ಯಕ್ಷ ಸಂಜೀವ ಶಿರಹಟ್ಟಿ, ಕೆ.ಸಿ.ಕೋಮಲಾಚಾರ್, ಡಾ.ನಾರಾಯಣ ಪವಾರ, ರವೀಂದ್ರಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನೀಡ್ಸ್ ಸಂಸ್ಥೆಯ ಅಧ್ಯಕ್ಷೆ ಮಾರುತಿ ದೇವಧರ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಫ್.ಅಕ್ಕಿ, ಬಿ.ಎಚ್.ಗಣಿ, ಶಶಿಕಲಾ ರವಿಶಂಕರ, ವನಮಾಲಾ ತುಮ್ಮಿನಕಟ್ಟಿ, ಎಚ್.ಪಿ.ಕನಕೇರಿ, ಆರ್.ಜಗನ್ನಾಥ, ಶಿವಕುಮಾರ, ನವೀನಕುಮಾರ ಇದ್ದರು.
ನಗರದ ಸ್ಟೇಷನ್ ರಸ್ತೆ ವರ್ತಕರ ಸಮುದಾಯ ಭವನದಲ್ಲಿಗುರುವಾರ ಏರ್ಪಡಿಸಲಾಗಿದ್ದ ಸ್ಥಳೀಯ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಸೇವಾ ಸಂಸ್ಥೆಯ(ನೀಡ್ಸ್) ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿಪರಿಸರ ಜಾಗೃತಿ ಮತ್ತು ಜೈವಿಕ ಇಂಧನ ಬಳಕೆ ಕುರಿತು ಜನರಲ್ಲಿಅರಿವು ಮೂಡಿಸುವ ಕಾರ್ಯ ಮಾಡುತ್ತಿರುವ ನೀಡ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಗರದಲ್ಲಿಯೂ ಕೂಡ ನೀಡ್ಸ್ ಸಂಸ್ಥೆ ಸಹಯೋಗದಲ್ಲಿನಗರಸಭೆ ವತಿಯಿಂದ 500 ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ. ನಗರಸಭೆ ವತಿಯಿಂದ ಬರುವ ಅ.2ರಿಂದ ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ನಗರದ ಜನತೆ ಸಹಕಾರ ನೀಡಬೇಕು ಎಂದರು.
ಹಾವೇರಿ ಹೊಸಮಠದ ಬಸವಶಾಂತಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಮಂಜುನಾಥ, ಸುಜಲಾನ್ ಫೌಂಡೇಶನ್ದ ದೀಪಕ ಕ್ಷೀರಸಾಗರ, ಫೇವಾರ್ಡ್ ಸಂಸ್ಥೆಯ ಆಂಜನೇಯರಡ್ಡಿ, ಕೃಷಿ ಇಲಾಖೆ ಉಪನಿರ್ದೇಶಕಿ ಸ್ಪೂರ್ತಿ, ಕರ್ನಾಟಕ ಸಂಘದ ಅಧ್ಯಕ್ಷ ಸಂಜೀವ ಶಿರಹಟ್ಟಿ, ಕೆ.ಸಿ.ಕೋಮಲಾಚಾರ್, ಡಾ.ನಾರಾಯಣ ಪವಾರ, ರವೀಂದ್ರಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನೀಡ್ಸ್ ಸಂಸ್ಥೆಯ ಅಧ್ಯಕ್ಷೆ ಮಾರುತಿ ದೇವಧರ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಫ್.ಅಕ್ಕಿ, ಬಿ.ಎಚ್.ಗಣಿ, ಶಶಿಕಲಾ ರವಿಶಂಕರ, ವನಮಾಲಾ ತುಮ್ಮಿನಕಟ್ಟಿ, ಎಚ್.ಪಿ.ಕನಕೇರಿ, ಆರ್.ಜಗನ್ನಾಥ, ಶಿವಕುಮಾರ, ನವೀನಕುಮಾರ ಇದ್ದರು.