ಆ್ಯಪ್ನಗರ

ತೋಟ ವಿಸ್ತರಣೆ, ಪುನಶ್ಚೇತನಕ್ಕೆ ಯೋಜನೆ ಜಾರಿ

ಹಾನಗಲ್ಲ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮತ್ತು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ರೈತರ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಅವಕಾಶ ನೀಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ಹಿರಿಯ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದ್ದಾರೆ.

Vijaya Karnataka 18 Dec 2018, 5:00 am
ಹಾನಗಲ್ಲ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮತ್ತು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ರೈತರ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಅವಕಾಶ ನೀಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ಹಿರಿಯ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದ್ದಾರೆ.
Vijaya Karnataka Web plant extension for plant expansion revival
ತೋಟ ವಿಸ್ತರಣೆ, ಪುನಶ್ಚೇತನಕ್ಕೆ ಯೋಜನೆ ಜಾರಿ


ಈ ಕುರಿತು ಪ್ರಕಟಣೆ ನೀಡಿರುವ ಅವರು, ನೀರಾವರಿ (ಕೊಳವೆಬಾವಿ) ಸೌಲಭ್ಯ ಹೊಂದಿದ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯಡಿ ಅವಕಾಶವಿದ್ದು, ಮಾವು, ಸಪೋಟಾ, ಅಂಗಾಂಶ ಬಾಳೆ, ಗೋಡಂಬಿ, ಅಡಕೆ ತೋಟದಲ್ಲಿ ಕಾಳು ಮೆಣಸು, ನೇರಳೆ, ನುಗ್ಗೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಯೋಜನೆ ಜಾರಿಗೊಂಡಿದೆ ಎಂದು ತಿಳಿಸಿದ್ದಾರೆ.

ಹಳೆಯ ಅಡಕೆ ಮತ್ತು ಮಾವು ತೋಟಗಳ ಪುನಶ್ಚೇತನಕ್ಕೆ ವಿಶೇಷ ಕಾರ್ಯಕ್ರಮವನ್ನು ಈ ಯೋಜನೆಯಲ್ಲಿ ರೂಪಿಸಲಾಗಿದೆ. ರೈತರು ಹನಿ ನೀರಾವರಿ ಅಳವಡಿಸಿಕೊಂಡಲ್ಲಿ ಶೇ.90 ರಷ್ಟು ಸಹಾಯಧನ ಮತ್ತು ಕೇಂದ್ರದ ಕೃಷಿ ಸಂಚಯಿನಿ ಯೋಜನೆಯಲ್ಲಿ ಪ್ರತ್ಯೇಕವಾದ ಧನ ಸಹಾಯವನ್ನೂ ನೀಡಲಾಗುತ್ತದೆ.

ಈ ಯೋಜನೆಯ ಲಾಭ ಪಡೆದು ತಮ್ಮ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಮತ್ತು ಹಳೆಯ ತೊಟಗಳನ್ನು ಪುನಶ್ಚೇತನ ಮಾಡಿಕೊಂಡು ಕೃಷಿ ಆದಾಯ ಕಂಡುಕೊಳ್ಳಬೇಕು ಎಂದು ತಿಳಿಸಿರುವ ಮಂಜುನಾಥ ಬಣಕಾರ (9449818355), ಆಸಕ್ತ ತೋಟಗಾರಿಕೆ ಬೆಳೆಗಾರರು ಹೊಬಳಿ ವ್ಯಾಪ್ತಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಅಗತ್ಯದ ದಾಖಲೆಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ