ಆ್ಯಪ್ನಗರ

ಹಬ್ಬಕ್ಕೆ ಬೆಲೆ ಏರಿಕೆ ಬಿಸಿ

ಅಕ್ಕಿಆಲೂರು: ಗಣೇಶ ಚತುರ್ಥಿಗೆ ಈ ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹಬ್ಬದ ಆಚರಣೆಗೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತ ಜನಸಾಮಾನ್ಯರಿಗೆ ಶಾಕ್‌ ಅನುಭವ ಉಂಟಾಗಿದೆ.

Vijaya Karnataka 2 Sep 2019, 5:00 am
ಅಕ್ಕಿಆಲೂರು: ಗಣೇಶ ಚತುರ್ಥಿಗೆ ಈ ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹಬ್ಬದ ಆಚರಣೆಗೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತ ಜನಸಾಮಾನ್ಯರಿಗೆ ಶಾಕ್‌ ಅನುಭವ ಉಂಟಾಗಿದೆ.
Vijaya Karnataka Web prices rise hot for the festival
ಹಬ್ಬಕ್ಕೆ ಬೆಲೆ ಏರಿಕೆ ಬಿಸಿ


ಹೂವು, ಹಣ್ಣು, ಪೂಜಾ ಸಾಮಗ್ರಿ, ಕಿರಾಣಿ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಂಡಿರುವುದು ಬಡ ಹಾಗೂ ಮಧ್ಯಮ ವರ್ಗಗಳಿಗೆ ಸೇರಿದ ಜನತೆಯನ್ನು ಕಂಗಾಲಾಗಿಸಿದೆ. ಒಂದೆಡೆ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದರೆ, ಇನ್ನೊಂದೆಡೆ ಜನಸಾಮಾನ್ಯರ ಆರ್ಥಿಕ ಸ್ಥಿತಿ ಯಥಾಸ್ಥಿತಿಯಲ್ಲಿರುವುದು ವಿಪರ್ಯಾಸ. ಸಂಪ್ರದಾಯ ಪರಿಪಾಲನೆಗೆ ಸಂಕಷ್ಟದ ಮಧ್ಯೆಯೂ ಗೊಣಗುತ್ತಲೇ ವಸ್ತುಗಳ ಖರೀದಿಯತ್ತ ಜನತೆ ಚಿತ್ತ ಹರಿಸಿದೆ.

ನೆರೆಯಿಂದ ಈ ಬಾರಿ ಸಂಕಷ್ಟ ನೆಲೆಯೂರಿದ್ದು, ಅತೀವೃಷ್ಟಿ ರೈತರು, ಜನಸಾಮಾನ್ಯರನ್ನು ಆತಂಕಕ್ಕೀಡು ಮಾಡಿದೆ. ಇಂಥ ಸಂದರ್ಭದಲ್ಲಿ ಬೆಲೆ ಏರಿಕೆ ಹಬ್ಬದ ಸಂಭ್ರಮಾಚರಣೆಗೆ ಬಿಸಿ ಮುಟ್ಟಿಸಿರುವುದು ವಿಪರ್ಯಾಸ. ಇನ್ನೊಂದೆಡೆ ಕಳೆದೆರಡು ದಿನಗಳಿಂದ ತುಂತುರು ಮಳೆ ಸುರಿಯುತ್ತಿರುವುದು ಸಂಭ್ರಮಕ್ಕೆ ತೊಡಕಾಗಿ ಪರಿಣಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ