ಆ್ಯಪ್ನಗರ

ಡಿಸಿ ಹೆಸರಿನಲ್ಲಿ ಮತಯಾಚನೆ

ರಾಷ್ಟ್ರೀಯ ಪಕ್ಷವೊಂದರ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೋರ್ಜರಿ ಮಾಡಿ ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಒಂದು ಕೋಮಿನ ಜನರಿಗೆ ಸೂಚಿಸಿರುವ ಸಂದೇಶ ಹರಿಬಿಟ್ಟಿದ್ದಾರೆ ಎಂದು ಸ್ಥಳೀಯ ಚುನಾವಣಾಧಿಕಾರಿ ಶ್ರೀನಿವಾಸರಾವ್‌ ಗುರುವಾರ ರಾತ್ರಿ ಇಲ್ಲಿನ ಶಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vijaya Karnataka 12 May 2018, 9:02 am
ರಾಣೇಬೆನ್ನೂರ :ರಾಷ್ಟ್ರೀಯ ಪಕ್ಷ ವೊಂದರ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೋರ್ಜರಿ ಮಾಡಿ ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಒಂದು ಕೋಮಿನ ಜನರಿಗೆ ಸೂಚಿಸಿರುವ ಸಂದೇಶ ಹರಿಬಿಟ್ಟಿದ್ದಾರೆ ಎಂದು ಸ್ಥಳೀಯ ಚುನಾವಣಾಧಿಕಾರಿ ಶ್ರೀನಿವಾಸರಾವ್‌ ಗುರುವಾರ ರಾತ್ರಿ ಇಲ್ಲಿನ ಶಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Vijaya Karnataka Web Facebook


ದೂರಿನಲ್ಲಿ ತಿಳಿಸಿರುವ ಪ್ರಕಾರ 9448484413 ಎಂಬ ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ನಲ್ಲಿ ಜಿಲ್ಲಾಧಿಕಾರಿಗಳು ಒಂದು ರಾಜಕೀಯ ಪಕ್ಷ ದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿಯ ಹೆಸರಿನಲ್ಲಿ ಪತ್ರ ತಯಾರಿಸಿ ಸಂದೇಶ ಹರಿಬಿಟ್ಟಿದ್ದಾರೆ. ಇದು ಮತದಾರರ ಮೇಲೆ ಪ್ರಭಾವ ಬೀರುವಂತಿರುವಂತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಅದೇಶದ ಮೇಲೆ ದೂರು ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ