ಆ್ಯಪ್ನಗರ

ಸಂಗೂರು ಕಾರ್ಖಾನೆ ಎದುರು ಪ್ರತಿಭಟನೆ

ಹಾವೇರಿ: ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣವನ್ನು ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ಸಂಗೂರು ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಖಾನೆ ಗೇಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

Vijaya Karnataka 10 Apr 2019, 5:00 am
ಹಾವೇರಿ: ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣವನ್ನು ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ಸಂಗೂರು ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಖಾನೆ ಗೇಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
Vijaya Karnataka Web HVR-9 HAVERI 12


ಈ ವೇಳೆ ಸಂಘದ ಅಧ್ಯP್ಷÜ ರಾಜಶೇಖರ ಬೆಟಗೇರಿ ಮಾತನಾಡಿ, ಸಂಗೂರು ಸಹಕಾರಿ ಕಾರ್ಖಾನೆ ಗುತ್ತಿಗೆದಾರರಾದ ಜಿಎಂ ಶುಗರ್ಸ್‌ನವರು 2018-19ನೇ ಸಾಲಿನಲ್ಲಿ ದರ ನಿಗದಿ ಮಾಡದೇ ಕಬ್ಬು ಅರೆಯುವ ಕಾರ್ಯ ಆರಂಭಿಸಿದ್ದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮೇಲೆ ಉಪ ವಿಭಾಗಾಧಿಕಾರಿ ಅಧ್ಯP್ಷÜತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಖಾನೆ ಗುತ್ತಿಗೆದಾರರು ಪ್ರತಿ ಟನ್‌ ಕಬ್ಬಿಗೆ 2613 ರೂ. ನೀಡುವುದಾಗಿ ಭರವಸೆ ನೀಡಿದ್ದರು. ಕಳೆದ ಡಿಸೆಂಬರ್‌ 20ರವರೆಗೆ ಕಬ್ಬು ಪೂರೈಸಿದ ರೈತರಿಗೆ ಗುತ್ತಿಗೆದಾರರು ಟನ್‌ ಕಬ್ಬಿಗೆ 1710 ರೂ.ಗಳಂತೆ ಪಾವತಿಸಿದ್ದಾರೆ. ಆದರೆ, ಬಾಕಿ ಹಣವನ್ನು ಇದುವರೆಗೆ ನೀಡಿಲ್ಲ. ಆದ್ದರಿಂದ ಅನಿವಾರ್ಯವಾಗಿ ಕಾರ್ಖಾನೆ ಗೇಟ್‌ ಬಂದ್‌ ಮಾಡಲಾಗಿದೆ ಎಂದರು.

ಕಬ್ಬಿಗೆ ದರ ನಿಗದಿಪಡಿಸಿ ಬಾಕಿ ಹಣ ಕೊಡಿಸುವಂತೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಜಿಲ್ಲಾಧಿಕಾರಿಗಳಿಗೆ ಅನೇಕ ಬಾರಿ ಪತ್ರ ಬರೆಯಲಾಗಿದೆ. ಆದರೂ ಯಾರೂ ಕ್ರಮ ಕೈಗೊಂಡಿಲ್ಲ. ರೈತರಿಗೆ ಕಬ್ಬಿನ ಹಣ ಪಾವತಿಸುವವರೆಗೂ ಗೇಟ್‌ ತೆಗೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ