ಆ್ಯಪ್ನಗರ

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹಾವೇರಿ: ಕಾಲೇಜ್‌ ವಿದ್ಯಾರ್ಥಿನಿ ದೌರ್ಜನ್ಯ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ಮತ್ತು ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 28 Sep 2019, 5:00 am
ಹಾವೇರಿ: ಕಾಲೇಜ್‌ ವಿದ್ಯಾರ್ಥಿನಿ ದೌರ್ಜನ್ಯ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ಮತ್ತು ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ನಗರದಲ್ಲಿಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web protest against violence against student
ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ


ಪ್ರತಿಭಟನೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ವಿದ್ಯಾರ್ಥಿಗಳ ಮೇಲೆ ಹಿಂಸೆ ಮಾಡಿದ ಆರೋಪಿಗಳ ವಿರುದ್ಧ ಮತ್ತು ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ಈ ವೇಳೆ ಡಿವೈಎಫ್‌ಐ ಸಂಘಟನೆ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಇತ್ತೀಚೆಗೆ ವಿಜಯಪುರ ಜಿಲ್ಲೆಯ ದೇವರಹಿಪ್ಪಿರಗಿ ತಾಲೂಕಿನ ಅಸಂತಾಪುರ ಗ್ರಾಮದ ಪಿಯು ಕಾಲೇಜ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಮಾಡಿರುವುದು ದೇಶದ ನಾಗರಿಕರು ತಲೆತಗ್ಗಿಸುವಂತೆ ಮಾಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ನಿರ್ಲಕ್ಷ್ಯ ಖಂಡನೀಯವಾಗಿದೆ. ಅನುಮಾನಸ್ಪದವಾದ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿಉಗ್ರಪ್ಪ ವರದಿ ಶಿಫಾರಸ್ಸುಗಳನ್ನು ಮತ್ತು ಕೇಂದ್ರದಲ್ಲಿಜಸ್ಟಿಸ್‌ ವರ್ಮಾ ವರದಿಯು ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಬೇಕು. ರಾಜ್ಯದ ಎಲ್ಲಶಾಲಾ-ಕಾಲೇಜ್‌ ಮತ್ತು ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿಲೈಂಗಿಕ ಕಿರುಕುಳ ವಿರೋಧ ಸಮಿತಿ ರಚಿಸಬೇಕು. ಕಾಲೇಜಿನಲ್ಲಿಸಿಸಿಟಿವಿ ಅಳವಡಿಕೆ ಮಾಡಬೇಕೆಂದು ಆಗ್ರಹಿಸಿದರು.

ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲುಶಿಕ್ಷೆಗೆ ಒಳಪಡಿಸುವುದರ ಜತೆಗೆ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿಎಸ್‌ಎಫ್‌ಐ ಜಿಲ್ಲಾಸಹಕಾರ್ಯದರ್ಶಿ ಬಸವರಾಜ ಭೋವಿ, ಮಹೇಶ ನರೇಗಲ್ಲಸೇರಿದಂತೆ ನೂರಾರು ಕಾಲೇಜ್‌ ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ