ಆ್ಯಪ್ನಗರ

ಉಚಿತ ಲ್ಯಾಪ್‌ಟಾಪ್‌ಗಾಗಿ ಪ್ರತಿಭಟನೆ

ಹಾವೇರಿ: ದ್ವಿತೀಯ, ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಜಿಲ್ಲಾಸಮಿತಿ ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ಶುಕ್ರವಾರ ನಗರದ ಹೊಸಮನಿ ಸಿದ್ಧ ವೃತ್ತದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು.

Vijaya Karnataka 18 Jan 2020, 5:00 am
ಹಾವೇರಿ: ದ್ವಿತೀಯ, ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಜಿಲ್ಲಾಸಮಿತಿ ನೇತೃತ್ವದಲ್ಲಿನೂರಾರು ವಿದ್ಯಾರ್ಥಿಗಳು ಶುಕ್ರವಾರ ನಗರದ ಹೊಸಮನಿ ಸಿದ್ಧ ವೃತ್ತದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು.
Vijaya Karnataka Web protest for a free laptop
ಉಚಿತ ಲ್ಯಾಪ್‌ಟಾಪ್‌ಗಾಗಿ ಪ್ರತಿಭಟನೆ


ಪ್ರತಿಭಟನೆ ಮೆರವಣಿಗೆ ನಗರದ ಮುನ್ಸಿಪಲ್‌ ಮೈದಾನದಿಂದ ಪ್ರಾರಂಭವಾಗಿ ಜೆ.ಎಚ್‌.ಪಟೇಲ್‌, ಎಂ.ಜಿ. ವೃತ್ತ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಬಂದು ತಲುಪಿ ರಾಜ್ಯ ಸರಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ನಂತರ ತಹಸೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಎಸ್‌ಎಫ್‌ಐ ಜಿಲ್ಲಾಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡಬೇಕಾದ ಸರಕಾರಿ ಸೌಲಭ್ಯಗಳನ್ನು ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡುತ್ತಿರುವುದು ತೀವ್ರ ಖಂಡನೀಯ. ಕಳೆದ ವರ್ಷ ರಾಜ್ಯ ಸರಕಾರ ಎಸ್‌ಸಿ/ ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿತ್ತು. ಎಸ್‌ಎಫ್‌ಐ ಸಂಘಟನೆ ಎಲ್ಲಾವರ್ಗದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಹೋರಾಟ ಮಾಡಲಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಎಲ್ಲಾವರ್ಗದ ವಿದ್ಯಾರ್ಥಿಗಳಿಗೂ ನೀಡುತ್ತಿದ್ದು ಸ್ವಾಗತಾರ್ಹ. ಅದೇ ರೀತಿ ವಿದ್ಯಾರ್ಥಿಗಳ ಮಧ್ಯ ತಾರತಮ್ಯ ಮಾಡದೇ ದ್ವಿತೀಯ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ ಮುಖಂಡರಾದ ಸೃಷ್ಟಿ ನಂದಿ ಮಾತನಾಡಿ, 2016-17 ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಹಂಚಲಾಗುತ್ತದೆ. ಆದರೆ 2017-18 ಮತ್ತು 2018-19 ನೇ ಸಾಲಿನಲ್ಲಿಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿಲ್ಲಸಂಬಂಧಪಟ್ಟ ಅಧಿಕಾರಿಗಳು ವಿಚಾರಿಸಿದಾಗ ಸರಕಾರದಿಂದ ಬಂದ ತಕ್ಷಣ ನಿಮಗೆ ಕೋಡುತ್ತೇವೆಂದು ಹೇಳುತ್ತಾ ಬಂದಿದ್ದು ಈಗ ಕೇವಲ 2019-20ನೇ ಸಾಲಿನ ಪ್ರಥಮ ವರ್ಷದ ಬಿಎ ಮತ್ತು ಬಿಕಾಂ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್‌ ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿಮುಖಂಡರಾದ ಹನುಮಂತಗೌಡ ಭರಮಗೌಡ್ರು, ಕೃಷ್ಣ ಕಡಕೋಳ, ರಾಜೇಶ್ವರಿ ಕಡಕೋಳ, ವಿದ್ಯಾ ಎಸ್‌.ವಿ., ಪ್ರಿಯಾಂಕಾ ಕೆ.ವಿ., ಪೂಜಾ ಬಿ.ಎಚ್‌., ಸುಧಾ ಎಫ್‌.ಡಿ., ಕವಿತಾ, ಲಕ್ಷ್ಮೀ, ರೇಣುಕಾ ಬಿ, ಅನುಷಾ ಬೆಂಗಳೂರು, ವಿಜಯಕುಮಾರ್‌ ಸಿ.ಎಮ್‌., ಈರಣ್ಣ ಎಫ್‌.ಎಮ್‌., ಮಂಜು ಎಸ್‌.ಎಚ್‌., ವೀರೇಶ ಎಮ್‌.ಬಿ. ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ