ಆ್ಯಪ್ನಗರ

ರೈತರಿಂದ ಪ್ರತಿಭಟನಾ ರಾರ‍ಯಲಿ

ಹಾವೇರಿ: ರೈತ ವಿರೋಧಿ ತಿದ್ದುಪಡಿ ಮಸೂದೆಗಳನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುತ್ತಿರುವ ವಿಧೇಯಕಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ ಬಣ) ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಸರಕಾರಕ್ಕೆ ಒತ್ತಾಯಿಸಿದರು.

Vijaya Karnataka 29 Sep 2020, 5:00 am
ಹಾವೇರಿ: ರೈತ ವಿರೋಧಿ ತಿದ್ದುಪಡಿ ಮಸೂದೆಗಳನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುತ್ತಿರುವ ವಿಧೇಯಕಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ ಬಣ) ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಸರಕಾರಕ್ಕೆ ಒತ್ತಾಯಿಸಿದರು.
Vijaya Karnataka Web 28 MANJU 1A_23
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿಟವೆಲ್‌ ಬೀಸುತ್ತ ರೈತರು ಪ್ರತಿಭಟಿಸಿದರು.


ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ರಾರ‍ಯಲಿ ಎಂ.ಜಿ ರಸ್ತೆ, ಜೆ.ಪಿ ವೃತ್ತದ ಮಾರ್ಗದಲ್ಲಿಸಂಚರಿಸಿ ಹೊಸಮನಿ ಸಿದ್ದಪ್ಪ ವೃತ್ತ ತಲುಪಿತು. ಪ್ರತಿಭಟನೆಯಲ್ಲಿಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಮಾತನಾಡಿ, ಕಾಯಿದೆ ಜಾರಿಯಿಂದ ರೈತರ ಜಮೀನುಗಳನ್ನು ಬಂಡವಾಳಶಾಹಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ಸೂಚಿಸಿವೆಯೇ ಹೊರತು ಯಾವ ರಾಜಕೀಯ ಪಕ್ಷದವರ ಕುಮ್ಮಕ್ಕಿಗೆ ಬಲಿಯಾಗಿಲ್ಲಎಂದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರುತ್ತಿರುವ ಕಾಯಿದೆಗಳು ರೈತರಿಗೆ ಮಾರಕವಾಗಿವೆ. ಹಿಂದೆ ಉಳುವವನೇ ಭೂಮಿಯ ಒಡೆಯ ಎಂಬ ಕಾಯಿದೆ ಜಾರಿಯಿತ್ತು. ಪ್ರಸ್ತುತ ಉಳ್ಳವನೇ ಭೂಮಿಯ ಒಡೆಯ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಮುಂಬರುವ ಚುನಾವಣೆಗಳಲ್ಲಿರೈತವಿರೋಧಿ ಸರಕಾರಕ್ಕೆ ತಕ್ಕ ಪಾಠ ಕಲಿಸುವ ಮುಖಾಂತರ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಹನುಮಂತಪ್ಪ ಉಚ್ಚಣ್ಣನವರ ಮಾತನಾಡಿ, ಮನೆ ಸಂತ್ರಸ್ತರಿಗೆ ಪರಿಹಾರವಿಲ್ಲ, ಎರಡು ವರ್ಷದಿಂದ ಬೆಳೆ ವಿಮಾ ಪರಿಹಾರ ಬಂದಿಲ್ಲ. ಈಗ ಕಾಯಿದೆಗಳು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜಾರಿಗೆ ತಂದಿರುವ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಂದ್‌ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ, ಜೆಡಿಎಸ್‌ ಜಿಲ್ಲಾಘಟಕ, ದಲಿತ ಸಂಘರ್ಷ ಸಮಿತಿ, ಉತ್ತರ ಕರ್ನಾಟಕ ರೈತ ಸಂಘ, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ, ಎಸ್‌ಎಫ್‌ಐ, ಭಾರತ ಕಮ್ಯುನಿಷ್‌್ಟ ಪಕ್ಷ, ಕರ್ನಾಟಕ ಪರಿಶಿಷ್ಟರ ಪರಿವರ್ತನಾ ವೇದಿಕೆ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ನೀಡಿದ್ದವು.

ಪ್ರತಿಭಟನೆಯಲ್ಲಿಮಾನವ ಹಕ್ಕು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಾಜ್ಯಾಧ್ಯಕ್ಷ ಬಸವರಾಜ ಟೀಕೆಹಳ್ಳಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಎಂ ಹಿರೇಮಠ, ಎಂ.ಎಂ ಮೈದೂರ, ಕರ್ನಾಟಕ ರಕ್ಷಣಾ ವೇದಿಕೆಯ ರಮೇಶ ಆನವಟ್ಟಿ, ಜೆಡಿಎಸ್‌ನ ಆರ್‌.ಬಿ ಪಾಟೀಲ, ಬಸವರಾಜ ಹಾದಿ, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಉಡಚಪ್ಪ ಮಾಳಗಿ, ಮಾದೇವಪ್ಪ ಮಾಳಮ್ಮನವರ, ಹಾಸಿಂ ಜಗಳೂರ, ಮಹೇಶ ಕೊಟ್ಟೂರ, ಶಿವಬಸಪ್ಪ ಗೋವಿ, ಅಕ್ಷತಾ ಕೆ.ಸಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ