ಆ್ಯಪ್ನಗರ

ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಹಾವೇರಿ: ಕೆಲಸದಿಂದ ವಜಾಗೊಳಿಸುತ್ತಿರುವುದನ್ನು ಖಂಡಿಸಿ ಹಾಗೂ ಎರಡು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಜಿಲ್ಲಾಸ್ಪತ್ರೆ ಡಿ ಗ್ರುಪ್‌ನ ಹೊರಗುತ್ತಿಗೆ ನೌಕರರು ಜಿಲ್ಲಾಆಸ್ಪತ್ರೆ ಮುಂಭಾಗದಲ್ಲಿಶುಕ್ರವಾರ ಮೌನ ಪ್ರತಿಭಟನೆ ನಡೆಸಿ ಶಾಸಕ ನೆಹರು ಓಲೇಕಾರಗೆ ಮನವಿ ಸಲ್ಲಿಸಿದರು.

Vijaya Karnataka 15 Feb 2020, 5:00 am
ಹಾವೇರಿ: ಕೆಲಸದಿಂದ ವಜಾಗೊಳಿಸುತ್ತಿರುವುದನ್ನು ಖಂಡಿಸಿ ಹಾಗೂ ಎರಡು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ಜಿಲ್ಲಾಸ್ಪತ್ರೆ ಡಿ ಗ್ರುಪ್‌ನ ಹೊರಗುತ್ತಿಗೆ ನೌಕರರು ಜಿಲ್ಲಾಆಸ್ಪತ್ರೆ ಮುಂಭಾಗದಲ್ಲಿಶುಕ್ರವಾರ ಮೌನ ಪ್ರತಿಭಟನೆ ನಡೆಸಿ ಶಾಸಕ ನೆಹರು ಓಲೇಕಾರಗೆ ಮನವಿ ಸಲ್ಲಿಸಿದರು.
Vijaya Karnataka Web protests of district outsourcing employees
ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಪ್ರತಿಭಟನೆ


ಈ ವೇಳೆ ಹೊರಗುತ್ತಿಗೆ ನೌಕರರು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೆ ಸಿಬ್ಬಂದಿ ಕೊರತೆ ಇದೆ. ಅದರಲ್ಲೂಸಿಬ್ಬಂದಿಯನ್ನು ಏಕಾಏಕಿ ತೆಗೆದು ಹಾಕುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

100ಕ್ಕೆ 75 ರಷ್ಟು ಸಿಬ್ಬಂದಿ ನೇಮಕವಾಗಿರಬೇಕು ಅಂತ ಇದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿಸಿಬ್ಬಂದಿ ಕೊರತೆ ಇದೆ. ಸುಮಾರು 15 ವರ್ಷಗಳಿಂದ ಇದೇ ವೃತ್ತಿ ನಂಬಿ ಜೀವನ ಸಾಗಿಸುತ್ತಿರುವ ನಮ್ಮನ್ನು ಹಂತ ಹಂತವಾಗಿ ಕೆಲಸದಿಂದ ತೆಗೆಯುತ್ತಿದ್ದಾರೆ. ಮೊನ್ನೆ ಡಿ ಗ್ರುಪ್‌ನ 6 ಜನ, ನಾನ್‌ ಕ್ಲಿನಿಕ್‌ನಲ್ಲಿ5 ಜನ ಒಟ್ಟು 11 ಜನರನ್ನು ಕೆಲಸದಿದ್ದ ತೆಗೆದು ಹಾಕಿ ಮುಂದೆ ಟ್ರಾಮಾ ಸೆಂಟರ್‌ಗೆ ತುಂಬಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ. ಅಲ್ಲಿಯವರೆಗೂ ಕುಟುಂಬ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಶಾಸಕರು ಸ್ಪಂದಿಸಿ ಕೆಲಸ ಮರಳಿ ಕೊಡಿಸುವ ಹಾಗೂ ಬಾಕಿ ವೇತನ ಕೊಡಿಸುವ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ