ಆ್ಯಪ್ನಗರ

ಎಸಿಬಿಯಿಂದ ಸಾರ್ವಜನಿಕ ಕುಂದುಕೊರತೆಗಳ

ಹಾವೇರಿ: ಸವಣೂರು ತಾಪಂ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಹಾವೇರಿ ಘಟಕದಿಂದ ಸೆ.16 ರಂದು ಬೆಳಗ್ಗೆ 11 ಕ್ಕೆ ಸಾರ್ವಜನಿಕರ ಕುಂದು ಕೊರತೆಗಳ ಸಭೆ ನಡೆಯಲಿದೆ.

Vijaya Karnataka 15 Sep 2019, 5:00 am
ಹಾವೇರಿ: ಸವಣೂರು ತಾಪಂ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಹಾವೇರಿ ಘಟಕದಿಂದ ಸೆ.16 ರಂದು ಬೆಳಗ್ಗೆ 11 ಕ್ಕೆ ಸಾರ್ವಜನಿಕರ ಕುಂದು ಕೊರತೆಗಳ ಸಭೆ ನಡೆಯಲಿದೆ.
Vijaya Karnataka Web public grievances from the acb
ಎಸಿಬಿಯಿಂದ ಸಾರ್ವಜನಿಕ ಕುಂದುಕೊರತೆಗಳ


ತಾಲೂಕಿನ ಸರಕಾರಿ ಕಚೇರಿಗಳಲ್ಲಿನಡೆಯುತ್ತಿರುವ ದುರಾಡಳಿತ, ವಿಳಂಬ ನೀತಿ, ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿರುವುದು, ಕಳಪೆ ಕಾಮಗಾರಿ, ಹಣ ದುರುಪಯೋಗ ಕುರಿತು ದೂರುಗಳು ಇದ್ದಲ್ಲಿಅಥವಾ ಸರಕಾರಿ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿವೃಥಾ ತೊಂದರೆ ಕೊಡುವುದು ಅಥವಾ ಲಂಚ ಕೇಳುತ್ತಿದ್ದ ಬಗ್ಗೆ ದೂರುಗಳಿದ್ದಲ್ಲಿಈ ಸಭೆಗೆ ಹಾಜರಾಗಿ ನಿಗದಿತ ನಮೂನೆಯಲ್ಲಿದೂರುಗಳನ್ನು ಸಲ್ಲಿಸಬಹುದು ಹಾಗೂ ತಮ್ಮ ಅಹವಾಲುಗಳನ್ನು ಹೇಳಿಕೊಳ್ಳಬಹುದು.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇದ್ದರೆ ಅಂತ ದೂರುಗಳನ್ನು ಮತ್ತು ಅನಾಮಧೇಯ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ. ಜನತೆಯ ಕುಂದುಕೊರತೆಗಳನ್ನು ನಿವಾರಿಸುವುದೇ ಈ ಸಭೆಯ ಉದ್ದೇಶವಾಗಿದ್ದರಿಂದ ದುರುದ್ದೇಶದಿಂದ ಕೂಡಿದ ದೂರುಗಳನ್ನಾಗಲೀ ಅಥವಾ ವ್ಯರ್ಥ ವಾಗ್ವಾದಗಳನ್ನಾಗಲಿ ಮಾನ್ಯ ಮಾಡುವುದಿಲ್ಲ. ಆಡಳಿತದಲ್ಲಿಪಾರದರ್ಶಕತೆ ತರುವುದು ಲೋಕಾಯುಕ್ತ ಸಂಸ್ಥೆಯ ಮುಖ್ಯ ಗುರಿಯಾಗಿರುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಹಾವೇರಿ ಪೊಲೀಸ್‌ ವಿಭಾಗದ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ