ರಾಣೇಬೆನ್ನೂರ : ತಾಲೂಕಿನ ನದಿಹರಳಹಳ್ಳಿ ಗ್ರಾಮದ ರೈತ ಮಹಾಂತೇಶಪ್ಪ ಹನುಮಂತಪ್ಪ ಬಜಾರಿ ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಭಾನುವಾರ ರೈತ ಸಂಘಟನೆಯ ಕಾರ್ಯಕರ್ತರು ನಗರದ ಸರಕಾರಿ ಆಸ್ಪತ್ರೆಯ ಎದುರು ಮೃತನ ಶವವಿಟ್ಟು ಪ್ರತಿಭಟನೆ ನಡೆಸಿದರು. ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಬೆಳೆ ಹಾಳಾಗಿದೆ. ಬೆಳೆಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಸಾಲ ಬಾಧೆಯೇ ರೈತನ ಆತ್ಮಹತ್ಯೆಗೆ ಕಾರಣವಾಗಿದೆ. ಕೂಡಲೇ ಸರಕಾರ ರೈತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರಾಣೇಬೆನ್ನೂರ : ರೈತನ ಶವವಿಟ್ಟು ಪ್ರತಿಭಟನೆ
ರಾಣೇಬೆನ್ನೂರ : ತಾಲೂಕಿನ ನದಿಹರಳಹಳ್ಳಿ ಗ್ರಾಮದ ರೈತ ಮಹಾಂತೇಶಪ್ಪ ಹನುಮಂತಪ್ಪ ಬಜಾರಿ ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಭಾನುವಾರ ರೈತ ಸಂಘಟನೆಯ ಕಾರ್ಯಕರ್ತರು ನಗರದ ಸರಕಾರಿ
Vijaya Karnataka 28 Sep 2020, 5:00 am