ಆ್ಯಪ್ನಗರ

ಅತ್ಯಾಚಾರ ಪ್ರಕರಣ: ವಿದ್ಯಾರ್ಥಿಗಳ ಹೆದ್ದಾರಿ ತಡೆ

ಹಾವೇರಿ: ಕಾಲೇಜ್‌ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಶನಿವಾರ ಜಿ.ಎಚ್‌. ಕಾಲೇಜ್‌ ಎದುರಿನ ಹೆದ್ದಾರಿ ತಡೆ ನಡೆದು ಪ್ರತಿಭಟನೆ ನಡೆಸಿದರು.

Vijaya Karnataka 7 Jul 2019, 5:00 am
ಹಾವೇರಿ: ಕಾಲೇಜ್‌ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಶನಿವಾರ ಜಿ.ಎಚ್‌. ಕಾಲೇಜ್‌ ಎದುರಿನ ಹೆದ್ದಾರಿ ತಡೆ ನಡೆದು ಪ್ರತಿಭಟನೆ ನಡೆಸಿದರು.
Vijaya Karnataka Web HVR-6 HAVERI 2


ನಂತರ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಮಿತಿ ರಾಜ್ಯಾಧ್ಯಕ್ಷ ಬಸವರಾಜ ಟೀಕೆಹಳ್ಳಿ ಮಾತನಾಡಿ, ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಗಾಂಜಾ ನೀಡುವ ಮೂಲಕ ಪುಂಡರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಲ್ಲದೆ ವಿಡಿಯೋ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಇಂತಹವರಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ನೀಡುವ ಮೂಲಕ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಅಷ್ಟೇ ಅಲ್ಲದೆ ಅತ್ಯಾಚಾರದ ವಿಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದವರ ವಿರುದ್ಧವೂ ಸರಿಯಾದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಮತ್ತು ದೇಶದ ಎಲ್ಲೆಡೆ ಅತ್ಯಾಚಾರ, ಬಲತ್ಕಾರಗಳು ನಡೆಯುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರ ಯಾವುದೇ ಕ್ರಮ ಜಾರಿ ಮಾಡದೇ ಚಿರನಿದ್ರೆಯಲ್ಲಿವೆ. ಆದಕಾರಣ ಚಿಕ್ಕ ಮಕ್ಕಳಿಂದ ಹಿಡಿದು ಕಾಲೇಜು ವಿದ್ಯಾರ್ಥಿನಿಯರು ಹಾಗೂ ವೃದ್ಧೆಯರೂ ಮೇಲೆ ಕೂಡ ಇತಂಹ ಕೃತ್ಯಗಳು ನಡೆಯುತ್ತಲಿವೆ. ಆರೋಪಿಗಳÜನ್ನು ಪೊಲೀಸ್‌ ಇಲಾಖೆ ಅರೆಸ್ಟ್‌ ಮಾಡಿ ಕಾನೂನಿಗೆ ಒಪ್ಪಿಸುತ್ತಾರೆ. ಸ್ವಲ್ಪ ದಿನಗಳ ಬಳಿಕ ಅವರು ಹೊರಗಡೆ ಬಂದು ತಮ್ಮ ಕೃತ್ಯ ಮುಂದುವರಿಸುತ್ತಾರೆ. ಆದರೆ, ಇಂತಹ ಕೃತ್ಯಗಳಿಗೆ ಕೊನೆಯೇ ಇಲ್ಲವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಶಿಕ್ಷೆ ಜಾರಿಗೆ ತರಬೇಕು. ಇಲ್ಲವಾದರೆ ಮುಂದೊಂದು ದಿನ ಮಹಿಳೆಯರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಸರಕಾರಗಳು ಕಠಿಣ ಕಾನೂನನ್ನು ಜಾರಿ ಮಾಡದ್ದಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಶಿವಶಂಕರ ಟೀಕಿಹಳ್ಳಿ, ರಾಜ್ಯ ಉಪಾಧ್ಯಕ್ಷ ಹರೀಶ ಇಂಗಳಗೊಂದಿ, ಮಹಿಳಾ ಜಿಲ್ಲಾಧ್ಯಕ್ಷೆ ಲಕ್ಷ್ಮೇ ಜಿಂಗಾಡೆ, ಜಿಲ್ಲಾ ಸಂಚಾಲಕ ಮಾಲತೇಶ ಪಾಟೀಲ, ವಿಷ್ಟು ಜಿಂಗಾಡೆ, ಶಿವರಾಜ ಮಾಳಗಿ, ಕಾಲೇಜ್‌ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ