ಆ್ಯಪ್ನಗರ

ಅತ್ಯಾಚಾರಿಗೆ 8 ವರ್ಷ ಜೈಲು ಶಿಕ್ಷೆ

ಹಾವೇರಿ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಎಂದು ರುಜುವಾತಾದ ಸವಣೂರ ತಾಲೂಕು ಹೊಸಳ್ಳಿ ಗ್ರಾಮದ ಇಬ್ರಾಹಿಂಸಾಬ ಕರ್ಜಗಿ ಎಂಬಾತನಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ ಅವರು ಎಂಟು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 53 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Vijaya Karnataka 27 Jun 2019, 5:00 am
ಹಾವೇರಿ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಎಂದು ರುಜುವಾತಾದ ಸವಣೂರ ತಾಲೂಕು ಹೊಸಳ್ಳಿ ಗ್ರಾಮದ ಇಬ್ರಾಹಿಂಸಾಬ ಕರ್ಜಗಿ ಎಂಬಾತನಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ ಅವರು ಎಂಟು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 53 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
Vijaya Karnataka Web rape sentenced to 8 years in prison
ಅತ್ಯಾಚಾರಿಗೆ 8 ವರ್ಷ ಜೈಲು ಶಿಕ್ಷೆ


ಆರೋಪಿಯು 2017ರ ಮಾರ್ಚ್‌ 29 ರಂದು ಬಂಕಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಹೋತನಹಳ್ಳಿ ಗ್ರಾಮದ ಸಿಂದಗಿ ಮಠದಲ್ಲಿ ಸಂಬಂಧಿಕರ ಮದುವೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ಸುಳ್ಳು ನೆಪ ಹೇಳಿ ಒತ್ತಾಯ ಪೂರ್ವಕವಾಗಿ ಮಠದಿಂದ ಹೊರಗೆ ಕರೆದುಕೊಂಡು ಬಂದು ಖಾಸಗಿ ವಾಹನದಲ್ಲಿ ಬಂಕಾಪುರಕ್ಕೆ ಕರೆತಂದು, ಕೊಲೆ ಬೆದರಿಕೆವೊಡ್ಡಿ ಭಟ್ಕಳ ಮತ್ತು ಕೇರಳ ರಾಜ್ಯದ ಒಟ್ಟಪ್ಪನ್‌ ನಗರದವರೆಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು.

ಈ ಕುರಿತಂತೆ ಶಿಗ್ಗಾಂವ ವೃತ್ತದ ಸಿ.ಪಿ.ಐ. ಸಂತೋಷ್‌ ಕೆ.ಪವಾರ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಇಬ್ರಾಹೀಮಸಾಬನ ಮೇಲಿನ ಆರೋಪ ರುಜುವಾತಾದ ಕಾರಣ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ಮೇಲ್ಕಂಡಂತೆ ತೀರ್ಪು ನೀಡಿದ್ದಾರೆ. ದಂಡ ಪಾವತಿ ಹಣದಲ್ಲಿ 50 ಸಾವಿರ ರೂ.ಗಳನ್ನು ಪಿರ್ಯಾದಿದಾರರಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಎಂ.ಗೆಜ್ಜಿಹಳ್ಳಿ ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ