ಆ್ಯಪ್ನಗರ

ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲು ಆಗ್ರಹ

ಹಿರೇಕೆರೂರು: ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡುವುದು, ರೈತ ಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕೆ.ಎಸ್‌.ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ರೈತರು ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

Vijaya Karnataka 9 Aug 2019, 5:00 am
ಹಿರೇಕೆರೂರು: ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡುವುದು, ರೈತ ಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕೆ.ಎಸ್‌.ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ರೈತರು ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.
Vijaya Karnataka Web HVR-7HKR 6


ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ್‌ ಮಾತನಾಡಿ, ಸಾಲಮನ್ನಾ ರೈತರನ್ನು ಮೋಸ ಮಾಡುವ ಯೋಜನೆಯಾಗಿದೆ. ಕುಮಾರಸ್ವಾಮಿ ರೈತರ ಸಂಪೂರ್ಣ ಸಾಲಮನ್ನಾ ಮಾಡದೇ ಜವಾಬ್ದಾರಿಯಿಂದ ತಪ್ಪಿಸಿಕೊಂಡು ಪದತ್ಯಾಗ ಮಾಡಿದ್ದಾರೆ. ಸಾಲಮನ್ನಾ ಯೋಜನೆ ಅನೇಕ ರೈತರಿಗೆ ವಂಚನೆಯಾಗಿದೆ. ಎಲ್ಲಾ ರೈತರ ಸಾಲ ಮನ್ನಾ ಆಗಿಲ್ಲ. ಸಾಲ ಮನ್ನಾ ಯೋಜನೆ ಗೊಂದಲದ ಗೂಡಾಗಿದೆ ಎಂದು ದೂರಿದರು.

ಈಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಕ್ಕೆ ಬರುತ್ತಿದ್ದಂತೆಯೆ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇದುವರೆಗೂ ಸಾಲ ಮನ್ನಾ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಪರ ಸರಕಾರ ಎಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಯಾವುದೇ ಶರತ್ತು ಇಲ್ಲದೆ ರೈತರ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ರೈತರ ಪರವಾಗಿರುವ ಒಂಭತ್ತು ನಾನಾ ಬೇಡಿಕೆಗಳನ್ನು ಸರಕಾರ ತಕ್ಷ ಣ ಈಡೇರಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

ಮೆರವಣಿಗೆ: ರೈತರು ಪಟ್ಟಣದ ಪ್ರವಾಸಿ ಮಂದಿರದಿಂದ ಮಳೆಯಲ್ಲಿ ನೆಂದುಕೊಂಡು ತಹಶೀಲ್ದಾರ್‌ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ತಹಶೀಲ್ದಾರ್‌ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂಘದ ಗೌರವಾಧ್ಯಕ್ಷ ಸೋಮಶೇಖರಪ್ಪ ಚಪ್ಪರದಹಳ್ಳಿ, ತಾಲೂಕಾ ರೈತ ಸಂಘದ ಅಧ್ಯಕ್ಷ ಪ್ರಭುಗೌಡ ಪ್ಯಾಟಿ, ಕಾರ್ಯದರ್ಶಿ ಗಂಗನಗೌಡ ಮುದಿಗೌಡರ್‌, ಶಂಕರಗೌಡ ಶಿರಗಂಬಿ, ಶಂಕರಗೌಡ ಮಕ್ಕಳ್ಳಿ, ಮಹೇಂದ್ರ ತಳವಾರ, ಮಲ್ಲನಗೌಡ ಮಾಳಗಿ, ಮಂಜಪ್ಪ ಆರೀಕಟ್ಟಿ, ಶಂಭಣ್ಣ ಮುತ್ತಗಿ, ಲೋಕಪ್ಪ ಹೊಲಬಿಕೊಂಡ ಹಾಗೂ ಹಲವಾರು ರೈತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ