ಆ್ಯಪ್ನಗರ

ವಿವೇಕರ ಆದರ್ಶ ಸಾರ್ವಕಾಲಿಕ

ಶಿಗ್ಗಾವಿ : ಸ್ವಾಮಿ ವಿವೇಕಾನಂದರು ಭಾರತ ದೇಶದ ಕೀರ್ತಿಪತಾಕೆಯನ್ನು ವಿಶ್ವದೆತ್ತರಕ್ಕೆ ಏರಿಸಿದ ಮಹಾನ್‌ ಚೇತನ. ಅವರ ದಿವ್ಯ ವ್ಯಕ್ತಿತ್ವ ಯುವಕರಿಗೆ ಸಾರ್ವಕಾಲಿಕವಾಗಿ ಮಾರ್ಗದರ್ಶಿಯಾಗಿದೆ. ಇಂದಿನ ಯುವಕರು ಸ್ವಾಮಿ ವಿವೇಕಾನಂದರ ಆದರ್ಶ ತತ್ವದಡಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದು ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಹೇಳಿದರು.

Vijaya Karnataka 13 Jan 2019, 5:00 am
ಶಿಗ್ಗಾವಿ : ಸ್ವಾಮಿ ವಿವೇಕಾನಂದರು ಭಾರತ ದೇಶದ ಕೀರ್ತಿಪತಾಕೆಯನ್ನು ವಿಶ್ವದೆತ್ತರಕ್ಕೆ ಏರಿಸಿದ ಮಹಾನ್‌ ಚೇತನ. ಅವರ ದಿವ್ಯ ವ್ಯಕ್ತಿತ್ವ ಯುವಕರಿಗೆ ಸಾರ್ವಕಾಲಿಕವಾಗಿ ಮಾರ್ಗದರ್ಶಿಯಾಗಿದೆ. ಇಂದಿನ ಯುವಕರು ಸ್ವಾಮಿ ವಿವೇಕಾನಂದರ ಆದರ್ಶ ತತ್ವದಡಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದು ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಹೇಳಿದರು.
Vijaya Karnataka Web sensible ideal all the time
ವಿವೇಕರ ಆದರ್ಶ ಸಾರ್ವಕಾಲಿಕ


ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಯುವ ದಿನಾಚರಣೆ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ನಿಸ್ವಾರ್ಥ ಮನಸ್ಸಿನ 10 ಯುವಕರನ್ನು ನನಗೆ ಕೊಡಿ ಈ ದೇಶದ ಭೂಪಟವನ್ನೇ ಬದಲಾಯಿಸುತ್ತೇನೆ ಎಂದು ಸಾರಿದ ಸ್ವಾಮಿ ವಿವೇಕಾನಂದರು ಯುವಕರಲ್ಲಿ ಆತ್ಮ ವಿಶ್ವಾಸವನ್ನು ತುಂಬಿದ ಚೈತನ್ಯದ ಚಿಲುಮೆಯಾಗಿದ್ದಾರೆ ಎಂದರು.

ಪ್ರೊ. ಎಂ.ಎಸ್‌.ಕುರಂದವಾಡ ಮಾತನಾಡಿ, ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿ.ಎಂ.ಅರಗೋಳ, ಸಿ.ಟಿ.ಪಾಟೀಲ, ಎಂ.ಬಿ.ನೀರಲಗಿ, ಕೆ.ಜಿ.ಮಲ್ಲೂರ, ಮಂಜುಳಾ ಹೊನ್ನಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಆರ್‌.ವಿ.ಹೆಬ್ಬಳ್ಳಿ ಸ್ವಾಗತಿಸಿದರು. ಪ್ರೊ. ಕೆ.ಬಸಣ್ಣ ನಿರೂಪಿಸಿದರು. ಸುಮಿತ್ರಾ ರಾಮಾಪುರಮಠ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ